25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮುಂಡಾಜೆ: ಶಾಸಕಾಂಗ ಕಾರ್ಯಾಂಗ ಮತ್ತು ನ್ಯಾಯಾಂಗಗಳು ಸ್ವತಂತ್ರವಾಗಿದ್ದರೂ ಪರಸ್ಪರ ಪೂರಕವಾಗಿ ಕೆಲಸ ನಿರ್ವಹಿಸಬೇಕು. ಆದರೆ ಸುಮಾರು 88000 ಇತ್ಯರ್ಥವಾಗದ ವ್ಯಾಜ್ಯಗಳಿದ್ದರೂ ಅದನ್ನು ಇತ್ಯರ್ಥಪಡಿಸದೆ ಸುಪ್ರೀಂ ಕೋರ್ಟ್ ತನ್ನ ಅತಿಯಾದ ಕ್ರಿಯಾಶೀಲತೆಯಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯನಿರ್ವಹಣೆಯ ಮೇಲೆ ಹಸ್ತಕ್ಷೇಪ ನಡೆಸಿದಂತೆ ಇತ್ತೀಚೆಗೆ ಕಂಡು ಬರುತ್ತಿದೆ ಎಂದು ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ಅಭಿಪ್ರಾಯಪಟ್ಟರು.

ಅವರು ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿ ನ.26 ರಂದು ಕಾಲೇಜಿನ ಸಭಾಭವನದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆಂಗ್ಲ ಭಾಷಾ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

Related posts

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!