23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/2025 ಪ್ರಕರಣದ ರದ್ದು ಕೋರಿದ ಮತ್ತು ಪ್ರಕರಣಕ್ಕೆ ತಡೆ ಕೋರಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ವಿಠಲ್ ಗೌಡ, ಜಯಂತ್.ಟಿ ಸೇರಿ ಅರ್ಜಿ ಸಲ್ಲಸಿದ್ದ ಪ್ರಕರಣ ಕಳೆದ ಭಾರಿಯ ವಿಚಾರಣೆಯಲ್ಲಿ ಎಸ್.ಐ.ಟಿ ವಿಚಾರಣೆಗೆ ತಡೆಯಾಜ್ಞೆ ತೆರವು ಮಾಡಿ ವಿಚಾರಣೆ ಮುಂದೂಡಿತ್ತು.ಈಗ ನಡೆಯುತ್ತಿರುವ ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಕಿರುಕುಳ ನೀಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯ ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಮತ್ತೆ ಮುಂದೂಡಿದೆ.

ನ.28 ರಂದು ಎಸ್‌.ಐ.ಟಿ ತನಿಖೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ಮುಂದುವರಿದ ವಿಚಾರಣೆ ನಡೆಸಿದ ಹೈಕೋರ್ಟ್ ದೂರುದಾರರ ಪರವಾದ ವಾದಗಳನ್ನು ಆಲಿಸಿದ ಬಳಿಕ ಎಸ್.ಐ.ಟಿ ತನಿಖೆ ಮುಂದುವರಿಯಲಿ ಎಂದು ನ್ಯಾಯಾಲಯ ಸೂಚಿಸಿದೆ. ಈ ಹಿಂದೆ ನೀಡಿದ್ದ ಆದೇಶದಂತೆ ಅರ್ಜಿದಾರರಿಗೆ ಎಸ್.ಐ.ಟಿ ಯಾವುದೇ ಕಿರುಕುಳ ನೀಡಬಾರದು ಎಂದು ಸೂಚಿಸಿದೆ.ಇದೀಗ ಎಸ್.ಐ.ಟಿ ತನಿಖೆಗೆ ಯಾವುದೇ ಅಡೆತಡೆಗಳು ಇಲ್ಲವಾಗಿದ್ದು ತನಿಖೆ ಮುಂದುವರಿಯಲಿದೆ.

ಈಗಾಗಲೆ ಎಸ್.ಐ.ಟಿ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ BNS 215 ಅಡಿಯಲ್ಲಿ ವರದಿಯೊಂದನ್ನು ಸಲ್ಲಿಸಿದ್ದು ನ್ಯಾಯಾಲಯದಲ್ಲಿ ತನಿಖೆಯೊಂದಿಗೆ ಮಹೇಶ್ ಶೆಟ್ಟಿ ಹಾಗೂ ಇತರರು ಸಹಕರಿಸುತ್ತಿಲ್ಲ ಎಂಬ ವಿಚಾರವನ್ನು ನ್ಯಾಯಾಧೀಶರ ಮುಂದೆ ಇಟ್ಟಿರುವುದಾಗಿ ತಿಳಿದು ಬಂದಿದ್ದು ನ್ಯಾಯಾಲಯದಿಂದ ಡಿ.2 ರಂದು ಸೂಕ್ತ ಅನುಮತಿಗಳನ್ನು ಪಡೆದುಕೊಂಡು ಮುಂದಿನ ತನಿಖೆಗೆ ಸಿದ್ದತೆ ನಡೆಸುತ್ತಿದೆ.

Related posts

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya
error: Content is protected !!