25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

ಉಜಿರೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕರ ಮಗಳು ಅನುಪಮಾ ಹಾಗೂ ಖ್ಯಾತ ವಕೀಲ ಧನಂಜಯ್ ರಾವ್ ರವರ ಮಗ ಮಿಹಿರ್ ರವರ ವಿವಾಹ ಹಿನ್ನಲೆಯಲ್ಲಿ ನ.28ರಂದು ಉಜಿರೆಯ ಪ್ರತಾಪ ಸಿಂಹ ನಾಯಕ್ ರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ನವವಿವಾಹಿತರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿ.ಪ.ಸದಸ್ಯ ಡಾ.ಧನಂಜಯ ಸರ್ಜಿ, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಬೆಳ್ತಂಗಡಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್, ಉಜಿರೆ ಗ್ರಾ.ಪಂ.ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾ‌ರ್, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಉದ್ಯಮಿಗಳಾದ ರಾಜೇಶ್ ಪೈ, ಲಕ್ಷ್ಮಣ ಸಪಲ್ಯ, ಭರತ್, ರವಿಚಕ್ಕಿತ್ತಾಯ, ಉಜಿರೆ ಮಾಜಿ ಗ್ರಾ.ಪಂ.ಅಧ್ಯಕ್ಷೆ ಪುಷ್ಪವತಿ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.ಭೇಟಿಯ ವೇಳೆ ಉಜಿರೆಯಲ್ಲಿ ಸ್ಥಳಾಂತರಗೊಂಡು ಉದ್ಘಾಟನೆಗೊಂಡ ರಮ್ಯ ಒನ್ ಗ್ರಾಂ ಗೋಲ್ಡ್ ಮಳಿಗೆಗೆ ಭೇಟಿ ನೀಡಿದರು. ತದ ಬಳಿಕ ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿ, ಗೌರವ ಸ್ವೀಕರಿಸಿದರು.

Related posts

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya
error: Content is protected !!