July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

ಉಜಿರೆ: ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕಗಳನ್ನು ಕಂಠ ಪಾಠ ಮಾಡಿ ಎಳೆಯ ವಯಸ್ಸಿನಲ್ಲಿ ಅಭೂತಪೂರ್ವ ಸಾಧನೆ ಮಾಡಿದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರ ಮನೆಗೆ ಹಿಂದೂ ಮುಖಂಡ ಡಿ.ಕಿರಣ್ ಚಂದ್ರ ಪುಷ್ಪಗಿರಿ ರವರು ನ.27ರಂದು ಭೇಟಿ ನೀಡಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪ್ರಮೋದ್ ಡಿಡುಪೆ, ಸತೀಶ್ ಕನ್ಯಾಡಿ, ಗಣೇಶ್ ಬೊಳಿಯೊಂಜಿ, ಕು.ಅದ್ವಿತಿ ರಾವ್ ರವರ ತಾಯಿ ಅಖಿಲಾ, ಸಹೋದರಿ ಉಪಸ್ಥಿತರಿದ್ದರು.

ಇವರು ಶೃಂಗೇರಿ ಜಗದ್ಗುರುಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆ 18 ಅಧ್ಯಾಯದ 700 ಶ್ಲೋಕಗಳ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಜ)ಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ. ಇವರ ಭಗವದ್ಗೀತೆಯ 18 ಅಧ್ಯಾಯದ ಪಠಣವು ಖಾಸಗಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರತಿ ಸೋಮವಾರ ನೇರ ಪ್ರಸಾರಗೊಂಡಿತ್ತು. ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಭಗವದ್ಗೀತಾ ಕಂಠಪಾಠ ಪಠಣ (ಎರಡು ಅಧ್ಯಾಯ)ವನ್ನು ಮಾಡಿರುತ್ತಾರೆ. ಪ್ರಸ್ತುತ ಇವರು ಯಕ್ಷಭಾರತಿ ಕನ್ಯಾಡಿ ಸಂಸ್ಕಾರ ಶಿಕ್ಷಣದ ವಿದ್ಯಾರ್ಥಿನಿಯಾಗಿದ್ದು, ಇದಲ್ಲದೆ ವಿಧುಷಿ ಪ್ರಿಯ ಸತೀಶ್ ರವರಲ್ಲಿ ಭರತನಾಟ್ಯ ಅಭ್ಯಾಸ, ವಿಧುಷಿ ಶ್ಯಾಮಲ ನಾಗರಾಜ್ ರವರಲ್ಲಿ ಶಾಸ್ತ್ರೀಯ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ.

Related posts

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya
error: Content is protected !!