30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

ಉಜಿರೆ: ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕಗಳನ್ನು ಕಂಠ ಪಾಠ ಮಾಡಿ ಎಳೆಯ ವಯಸ್ಸಿನಲ್ಲಿ ಅಭೂತಪೂರ್ವ ಸಾಧನೆ ಮಾಡಿದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರ ಮನೆಗೆ ಹಿಂದೂ ಮುಖಂಡ ಡಿ.ಕಿರಣ್ ಚಂದ್ರ ಪುಷ್ಪಗಿರಿ ರವರು ನ.27ರಂದು ಭೇಟಿ ನೀಡಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪ್ರಮೋದ್ ಡಿಡುಪೆ, ಸತೀಶ್ ಕನ್ಯಾಡಿ, ಗಣೇಶ್ ಬೊಳಿಯೊಂಜಿ, ಕು.ಅದ್ವಿತಿ ರಾವ್ ರವರ ತಾಯಿ ಅಖಿಲಾ, ಸಹೋದರಿ ಉಪಸ್ಥಿತರಿದ್ದರು.

ಇವರು ಶೃಂಗೇರಿ ಜಗದ್ಗುರುಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆ 18 ಅಧ್ಯಾಯದ 700 ಶ್ಲೋಕಗಳ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಜ)ಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ. ಇವರ ಭಗವದ್ಗೀತೆಯ 18 ಅಧ್ಯಾಯದ ಪಠಣವು ಖಾಸಗಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರತಿ ಸೋಮವಾರ ನೇರ ಪ್ರಸಾರಗೊಂಡಿತ್ತು. ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಭಗವದ್ಗೀತಾ ಕಂಠಪಾಠ ಪಠಣ (ಎರಡು ಅಧ್ಯಾಯ)ವನ್ನು ಮಾಡಿರುತ್ತಾರೆ. ಪ್ರಸ್ತುತ ಇವರು ಯಕ್ಷಭಾರತಿ ಕನ್ಯಾಡಿ ಸಂಸ್ಕಾರ ಶಿಕ್ಷಣದ ವಿದ್ಯಾರ್ಥಿನಿಯಾಗಿದ್ದು, ಇದಲ್ಲದೆ ವಿಧುಷಿ ಪ್ರಿಯ ಸತೀಶ್ ರವರಲ್ಲಿ ಭರತನಾಟ್ಯ ಅಭ್ಯಾಸ, ವಿಧುಷಿ ಶ್ಯಾಮಲ ನಾಗರಾಜ್ ರವರಲ್ಲಿ ಶಾಸ್ತ್ರೀಯ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ.

Related posts

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya
error: Content is protected !!