September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜು ಭರವಸೆಯ ಪ್ರತೀಕ, ಶಕ್ತಿಯ ಮೂಲ,ಭವಿಷ್ಯದ ಕೇಂದ್ರ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ ಸುಮಂತ್ ಕುಮಾರ್ ರವರ ಇಚ್ಚಾಶಕ್ತಿ ಮತ್ತು ಬದ್ಧತೆಯನ್ನು ಮೆಚ್ಚುವಂತದ್ದು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ್

ಬೆಳ್ತಂಗಡಿ: ಎಕ್ಸೆಲ್ ಎಂದರೆ ಭರವಸೆ,ಎಕ್ಸೆಲ್ ಎಂದರೆ ಸ್ಪೂರ್ತಿ,ಎಕ್ಸೆಲ್ ಎಂದರೆ ಶಕ್ತಿ,ಎಕ್ಸೆಲ್ ಎಂದರೆ ಭವಿಷ್ಯ, ನಮ್ಮಲ್ಲಿರುವ ಶಕ್ತಿಯನ್ನು ಹೊರಗಿನ ಪ್ರಪಂಚಕ್ಕೆ ತೋರಿಸಬೇಕು,ಆವಾಗ ಮಾತ್ರ ಜಗತ್ತು ಸುಂದರವಾಗಿ ಕಾಣುತ್ತದೆ ಎಂದು ಖ್ಯಾತ ಚಿತ್ರನಟ ರಮೇಶ್ ಅರವಿಂದ ಅವರು ಎಕ್ಸೆಲ್ ಕಾಲೇಜಿನ “ಎಕ್ಸೆಲ್ ಪರ್ಬ” ಸಮಾರಂಭದಲ್ಲಿ ನ.28 ರಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ನಮ್ಮನ್ನ ನಾವು ಒಂದು ಒಳ್ಳೆಯ ಉದ್ದೇಶಕ್ಕೆ,ಒಳ್ಳೆಯ ಕೆಲಸಕ್ಕೆ ಉಪಯೋಗಿಸಬೇಕು. ನಾವು ಮಾಡುವ ಪ್ರತಿಯೊಂದು ಕೆಲಸವನ್ನು ದೇವರು ನೋಡುತ್ತಾ ಇರುತ್ತಾರೆ. ಹಾಗಾಗಿ ನಾವು ಮಾಡುವ ಕೆಲಸ ಸರಿಯಾಗಿ ಮಾಡಬೇಕು.ಯಾವುದೇ ಕಲೆಯನ್ನು ತೆಗೆದುಕೊಂಡರು,ಯಾವುದೇ ಜಾಗದಲ್ಲಿದ್ದರು ಅದರಲ್ಲಿ ವಿಶೇಷವಾಗಿ ಸಾಧನೆ ಮಾಡಬೇಕು.

ನಮ್ಮಲ್ಲಿ ನಾವು ಮೌಲ್ಯಯುತವನ್ನು ತೊಡಗಿಸಿಕೊಳ್ಳಬೇಕು.ನಮ್ಮ ಬಗ್ಗೆ ನಾವು ಅನುಮಾನ ಪಡಬಾರದು, ಯಾರಿಗೂ, ಏನೇ ಆದರೂ ಹೆದರಬಾರದು ಆವಾಗ ಮಾತ್ರ ನಾವು ನಮ್ಮನ್ನು ನಾವು ಅರ್ಥ ಮಾಡಿಕೊಳ್ಳಲು ಸಾಧ್ಯವಿದೆ.ಜೀವನದಲ್ಲಿ ನಗು ನಗುತ್ತಾ ಇರಬೇಕು,ಖುಷಿ ಖುಷಿಯಿಂದ ಇರಬೇಕು, ಭಯವನ್ನು ಮೊದಲು ತೆಗೆದು ಹಾಕಿದಾಗ ಯಶಸ್ವಿನ ಶಿಖರವೇರಬಹುದು ಎಂದು ರಮೇಶ್ ಅರವಿಂದ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಎಕ್ಸೆಲ್ ಸುಂದರವಾದ ವಿದ್ಯಾಕೇಂದ್ರ, ಇಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವವರು ನಿಜವಾಗಿಯೂ ಭಾಗ್ಯವಂತರು.ನಮ್ಮ ಭವಿಷ್ಯ ನಮ್ಮ ಕೈಯಲೇ ಇದೇ ಹೊರತು ಬೇರಲ್ಲೂ ಇಲ್ಲಾ. ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು ದೇಶಕ್ಕೆ ಶಕ್ತಿಯಾಗಬೇಕು‌ ಎಂದರು.ಸುಮಂತ್ ಕುಮಾರ್ ಒರ್ವ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ.ಅವರ ತ್ಯಾಗ,ಬದ್ದತೆ,ಇಚ್ಛಾಶಕ್ತಿಯಿಂದ ಇಂದು ಎಕ್ಸೆಲ್ ವಿಜೃಂಬಿಸುತ್ತಿದೆ ಎಂದರು.

Related posts

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya
error: Content is protected !!