32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

ಕೊಯ್ಯೂರು ಕಸಬ ಉನ್ನತೀ ಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ದ್ವಿಭಾಷಾ ಮಾಧ್ಯಮದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು.

ಉದ್ಘಾಟನೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಜಗನ್ನಾಥ ಮತ್ತು ಒಂದನೇ ತರಗತಿ ವಿದ್ಯಾರ್ಥಿಗಳು ಜಂಟಿಯಾಗಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ, ಗ್ರಾಮ ಪಂಚಾಯತ್ ಸದಸ್ಯ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಿರೀಶ್ ಆಚಾರ್ಯ, ಮರಿಯ ಹಾಗೂ ತಾಯoದಿರ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯಂತಿ ಉಪಸ್ಥಿತರಿದ್ದರು. ಸಂಸ್ಥೆಯ ಪೋಷಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಆಂಗ್ಲ ಮಾಧ್ಯಮದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವಂತೆ ಕೋರಲಾಯಿತು.

ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ಕನ್ನಡ, ಇಂಗ್ಲೀಷ್ ಎರಡೂ ಮಾಧ್ಯಮಗಳಲ್ಲೂ ಶಿಕ್ಷಣವನ್ನು ನೀಡುವುದರ ಬಗ್ಗೆ ಮಾಹಿತಿ ನೀಡಲಾಯಿತು. ಸಂಸ್ಥೆಯಲ್ಲಿ ಸರ್ಕಾರದಿಂದ ನೀಡಲ್ಪಟ್ಟ ಪ್ರಯೋಜನವನ್ನು ಪಡೆದುಕೊಂಡು ಸಂಸ್ಥೆಯ ಅಸ್ತಿತ್ವವನ್ನು ಕಾಪಾಡುವಂತೆ ಕರೆನೀಡಲಾಯಿತು. ವಿದ್ಯಾರ್ಥಿಗಳಾದ ನಿಶ್ಚಿತ, ಪ್ರಾರ್ಥನ, ವರ್ಷ, ಪ್ರಾರ್ಥನೆಗೈದರು. ಮುಖ್ಯ ಶಿಕ್ಷಕಿ ವಸಂತಿ ಕೆ. ಎನ್. ಸ್ವಾಗತಿಸಿ, ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ದೇವಿಬಾಯಿ ಡಿ. ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯರಾದ ಶ್ರೀಮತಿ ವಿಜಯಶ್ರೀ ಮತ್ತು ಶ್ರೀಮತಿ ವೇದಾವತಿ ಸಹಕರಿಸಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!