September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/2025 ಪ್ರಕರಣದ ರದ್ದು ಕೋರಿದ ಮತ್ತು ಪ್ರಕರಣಕ್ಕೆ ತಡೆ ಕೋರಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ವಿಠಲ್ ಗೌಡ, ಜಯಂತ್.ಟಿ ಸೇರಿ ಅರ್ಜಿ ಸಲ್ಲಸಿದ್ದ ಪ್ರಕರಣ ಕಳೆದ ಭಾರಿಯ ವಿಚಾರಣೆಯಲ್ಲಿ ಎಸ್.ಐ.ಟಿ ವಿಚಾರಣೆಗೆ ತಡೆಯಾಜ್ಞೆ ತೆರವು ಮಾಡಿ ವಿಚಾರಣೆ ಮುಂದೂಡಿತ್ತು.ಈಗ ನಡೆಯುತ್ತಿರುವ ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಕಿರುಕುಳ ನೀಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯ ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಮತ್ತೆ ಮುಂದೂಡಿದೆ.

ನ.28 ರಂದು ಎಸ್‌.ಐ.ಟಿ ತನಿಖೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ಮುಂದುವರಿದ ವಿಚಾರಣೆ ನಡೆಸಿದ ಹೈಕೋರ್ಟ್ ದೂರುದಾರರ ಪರವಾದ ವಾದಗಳನ್ನು ಆಲಿಸಿದ ಬಳಿಕ ಎಸ್.ಐ.ಟಿ ತನಿಖೆ ಮುಂದುವರಿಯಲಿ ಎಂದು ನ್ಯಾಯಾಲಯ ಸೂಚಿಸಿದೆ. ಈ ಹಿಂದೆ ನೀಡಿದ್ದ ಆದೇಶದಂತೆ ಅರ್ಜಿದಾರರಿಗೆ ಎಸ್.ಐ.ಟಿ ಯಾವುದೇ ಕಿರುಕುಳ ನೀಡಬಾರದು ಎಂದು ಸೂಚಿಸಿದೆ.ಇದೀಗ ಎಸ್.ಐ.ಟಿ ತನಿಖೆಗೆ ಯಾವುದೇ ಅಡೆತಡೆಗಳು ಇಲ್ಲವಾಗಿದ್ದು ತನಿಖೆ ಮುಂದುವರಿಯಲಿದೆ.

ಈಗಾಗಲೆ ಎಸ್.ಐ.ಟಿ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ BNS 215 ಅಡಿಯಲ್ಲಿ ವರದಿಯೊಂದನ್ನು ಸಲ್ಲಿಸಿದ್ದು ನ್ಯಾಯಾಲಯದಲ್ಲಿ ತನಿಖೆಯೊಂದಿಗೆ ಮಹೇಶ್ ಶೆಟ್ಟಿ ಹಾಗೂ ಇತರರು ಸಹಕರಿಸುತ್ತಿಲ್ಲ ಎಂಬ ವಿಚಾರವನ್ನು ನ್ಯಾಯಾಧೀಶರ ಮುಂದೆ ಇಟ್ಟಿರುವುದಾಗಿ ತಿಳಿದು ಬಂದಿದ್ದು ನ್ಯಾಯಾಲಯದಿಂದ ಡಿ.2 ರಂದು ಸೂಕ್ತ ಅನುಮತಿಗಳನ್ನು ಪಡೆದುಕೊಂಡು ಮುಂದಿನ ತನಿಖೆಗೆ ಸಿದ್ದತೆ ನಡೆಸುತ್ತಿದೆ.

Related posts

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ವೇಣೂರು ಎಕ್ಸೆಲ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ-ಕ್ರೀಡೆ ದೈಹಿಕ–ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ: ಸುಮಂತ್ ಕುಮಾರ್ ಜೈನ್

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya
error: Content is protected !!