July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

ಬೆಳ್ತಂಗಡಿ: ಕರ್ನಾಟಕ ಸರಕಾರದ ರಾಜ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ನಡೆದ ಪ್ರೌಢಶಾಲಾ ವಿಭಾಗದ ದ.ಕ. ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಸರಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರಿನ 9ನೇ ತರಗತಿಯ ವಿದ್ಯಾರ್ಥಿನಿ ಧನುಶ್ರೀ ಎಸ್. ಕುಲಾಲ್ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ರಾಜ್ಯಮಟ್ಟದಲ್ಲಿ ಎರಡು ಹಂತಗಳಲ್ಲಿ ಈ ಸ್ಪರ್ಧೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜಿಲ್ಲಾ ಹಂತಗಳಿಂದ ಆಯ್ಕೆಯಾದ ಒಟ್ಟು 106 ಸ್ಪರ್ಧಾಳುಗಳಲ್ಲಿ ಮೊದಲ ಹಂತದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪ್ರತಿ ವಿಭಾಗದಿಂದ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ನಂತರ ಅವರಿಗೆ ಎರಡನೇ ಹಂತದಲ್ಲಿ 12 ತೀರ್ಪುಗಾರರ ಸಮ್ಮುಖದಲ್ಲಿ ಅಂತಿಮ ಸ್ಪರ್ಧೆ ನಡೆದು ಧನುಶ್ರೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಕರ್ನಾಟಕ ರಾಜ್ಯ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸುತ್ತಾರೆ. ಇವರು ಬೆಳ್ತಂಗಡಿ ತಾಲೂಕಿನ ಪಿಲ್ಯದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಯ ಪುತ್ರಿ.

Related posts

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!