25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

ಬೆಳ್ತಂಗಡಿ: ಕರ್ನಾಟಕ ಸರಕಾರದ ರಾಜ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ನಡೆದ ಪ್ರೌಢಶಾಲಾ ವಿಭಾಗದ ದ.ಕ. ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಸರಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರಿನ 9ನೇ ತರಗತಿಯ ವಿದ್ಯಾರ್ಥಿನಿ ಧನುಶ್ರೀ ಎಸ್. ಕುಲಾಲ್ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ರಾಜ್ಯಮಟ್ಟದಲ್ಲಿ ಎರಡು ಹಂತಗಳಲ್ಲಿ ಈ ಸ್ಪರ್ಧೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜಿಲ್ಲಾ ಹಂತಗಳಿಂದ ಆಯ್ಕೆಯಾದ ಒಟ್ಟು 106 ಸ್ಪರ್ಧಾಳುಗಳಲ್ಲಿ ಮೊದಲ ಹಂತದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪ್ರತಿ ವಿಭಾಗದಿಂದ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ನಂತರ ಅವರಿಗೆ ಎರಡನೇ ಹಂತದಲ್ಲಿ 12 ತೀರ್ಪುಗಾರರ ಸಮ್ಮುಖದಲ್ಲಿ ಅಂತಿಮ ಸ್ಪರ್ಧೆ ನಡೆದು ಧನುಶ್ರೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಕರ್ನಾಟಕ ರಾಜ್ಯ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸುತ್ತಾರೆ. ಇವರು ಬೆಳ್ತಂಗಡಿ ತಾಲೂಕಿನ ಪಿಲ್ಯದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಯ ಪುತ್ರಿ.

Related posts

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya
error: Content is protected !!