September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

ಉಜಿರೆ: ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕಗಳನ್ನು ಕಂಠ ಪಾಠ ಮಾಡಿ ಎಳೆಯ ವಯಸ್ಸಿನಲ್ಲಿ ಅಭೂತಪೂರ್ವ ಸಾಧನೆ ಮಾಡಿದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರ ಮನೆಗೆ ಹಿಂದೂ ಮುಖಂಡ ಡಿ.ಕಿರಣ್ ಚಂದ್ರ ಪುಷ್ಪಗಿರಿ ರವರು ನ.27ರಂದು ಭೇಟಿ ನೀಡಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪ್ರಮೋದ್ ಡಿಡುಪೆ, ಸತೀಶ್ ಕನ್ಯಾಡಿ, ಗಣೇಶ್ ಬೊಳಿಯೊಂಜಿ, ಕು.ಅದ್ವಿತಿ ರಾವ್ ರವರ ತಾಯಿ ಅಖಿಲಾ, ಸಹೋದರಿ ಉಪಸ್ಥಿತರಿದ್ದರು.

ಇವರು ಶೃಂಗೇರಿ ಜಗದ್ಗುರುಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆ 18 ಅಧ್ಯಾಯದ 700 ಶ್ಲೋಕಗಳ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಜ)ಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ. ಇವರ ಭಗವದ್ಗೀತೆಯ 18 ಅಧ್ಯಾಯದ ಪಠಣವು ಖಾಸಗಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರತಿ ಸೋಮವಾರ ನೇರ ಪ್ರಸಾರಗೊಂಡಿತ್ತು. ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಭಗವದ್ಗೀತಾ ಕಂಠಪಾಠ ಪಠಣ (ಎರಡು ಅಧ್ಯಾಯ)ವನ್ನು ಮಾಡಿರುತ್ತಾರೆ. ಪ್ರಸ್ತುತ ಇವರು ಯಕ್ಷಭಾರತಿ ಕನ್ಯಾಡಿ ಸಂಸ್ಕಾರ ಶಿಕ್ಷಣದ ವಿದ್ಯಾರ್ಥಿನಿಯಾಗಿದ್ದು, ಇದಲ್ಲದೆ ವಿಧುಷಿ ಪ್ರಿಯ ಸತೀಶ್ ರವರಲ್ಲಿ ಭರತನಾಟ್ಯ ಅಭ್ಯಾಸ, ವಿಧುಷಿ ಶ್ಯಾಮಲ ನಾಗರಾಜ್ ರವರಲ್ಲಿ ಶಾಸ್ತ್ರೀಯ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya
error: Content is protected !!