July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

ಉಜಿರೆ: ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕಗಳನ್ನು ಕಂಠ ಪಾಠ ಮಾಡಿ ಎಳೆಯ ವಯಸ್ಸಿನಲ್ಲಿ ಅಭೂತಪೂರ್ವ ಸಾಧನೆ ಮಾಡಿದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರ ಮನೆಗೆ ಹಿಂದೂ ಮುಖಂಡ ಡಿ.ಕಿರಣ್ ಚಂದ್ರ ಪುಷ್ಪಗಿರಿ ರವರು ನ.27ರಂದು ಭೇಟಿ ನೀಡಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪ್ರಮೋದ್ ಡಿಡುಪೆ, ಸತೀಶ್ ಕನ್ಯಾಡಿ, ಗಣೇಶ್ ಬೊಳಿಯೊಂಜಿ, ಕು.ಅದ್ವಿತಿ ರಾವ್ ರವರ ತಾಯಿ ಅಖಿಲಾ, ಸಹೋದರಿ ಉಪಸ್ಥಿತರಿದ್ದರು.

ಇವರು ಶೃಂಗೇರಿ ಜಗದ್ಗುರುಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆ 18 ಅಧ್ಯಾಯದ 700 ಶ್ಲೋಕಗಳ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಜ)ಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ. ಇವರ ಭಗವದ್ಗೀತೆಯ 18 ಅಧ್ಯಾಯದ ಪಠಣವು ಖಾಸಗಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರತಿ ಸೋಮವಾರ ನೇರ ಪ್ರಸಾರಗೊಂಡಿತ್ತು. ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಭಗವದ್ಗೀತಾ ಕಂಠಪಾಠ ಪಠಣ (ಎರಡು ಅಧ್ಯಾಯ)ವನ್ನು ಮಾಡಿರುತ್ತಾರೆ. ಪ್ರಸ್ತುತ ಇವರು ಯಕ್ಷಭಾರತಿ ಕನ್ಯಾಡಿ ಸಂಸ್ಕಾರ ಶಿಕ್ಷಣದ ವಿದ್ಯಾರ್ಥಿನಿಯಾಗಿದ್ದು, ಇದಲ್ಲದೆ ವಿಧುಷಿ ಪ್ರಿಯ ಸತೀಶ್ ರವರಲ್ಲಿ ಭರತನಾಟ್ಯ ಅಭ್ಯಾಸ, ವಿಧುಷಿ ಶ್ಯಾಮಲ ನಾಗರಾಜ್ ರವರಲ್ಲಿ ಶಾಸ್ತ್ರೀಯ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya
error: Content is protected !!