23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜು ಭರವಸೆಯ ಪ್ರತೀಕ, ಶಕ್ತಿಯ ಮೂಲ,ಭವಿಷ್ಯದ ಕೇಂದ್ರ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ ಸುಮಂತ್ ಕುಮಾರ್ ರವರ ಇಚ್ಚಾಶಕ್ತಿ ಮತ್ತು ಬದ್ಧತೆಯನ್ನು ಮೆಚ್ಚುವಂತದ್ದು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ್

ಬೆಳ್ತಂಗಡಿ: ಎಕ್ಸೆಲ್ ಎಂದರೆ ಭರವಸೆ,ಎಕ್ಸೆಲ್ ಎಂದರೆ ಸ್ಪೂರ್ತಿ,ಎಕ್ಸೆಲ್ ಎಂದರೆ ಶಕ್ತಿ,ಎಕ್ಸೆಲ್ ಎಂದರೆ ಭವಿಷ್ಯ, ನಮ್ಮಲ್ಲಿರುವ ಶಕ್ತಿಯನ್ನು ಹೊರಗಿನ ಪ್ರಪಂಚಕ್ಕೆ ತೋರಿಸಬೇಕು,ಆವಾಗ ಮಾತ್ರ ಜಗತ್ತು ಸುಂದರವಾಗಿ ಕಾಣುತ್ತದೆ ಎಂದು ಖ್ಯಾತ ಚಿತ್ರನಟ ರಮೇಶ್ ಅರವಿಂದ ಅವರು ಎಕ್ಸೆಲ್ ಕಾಲೇಜಿನ “ಎಕ್ಸೆಲ್ ಪರ್ಬ” ಸಮಾರಂಭದಲ್ಲಿ ನ.28 ರಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ನಮ್ಮನ್ನ ನಾವು ಒಂದು ಒಳ್ಳೆಯ ಉದ್ದೇಶಕ್ಕೆ,ಒಳ್ಳೆಯ ಕೆಲಸಕ್ಕೆ ಉಪಯೋಗಿಸಬೇಕು. ನಾವು ಮಾಡುವ ಪ್ರತಿಯೊಂದು ಕೆಲಸವನ್ನು ದೇವರು ನೋಡುತ್ತಾ ಇರುತ್ತಾರೆ. ಹಾಗಾಗಿ ನಾವು ಮಾಡುವ ಕೆಲಸ ಸರಿಯಾಗಿ ಮಾಡಬೇಕು.ಯಾವುದೇ ಕಲೆಯನ್ನು ತೆಗೆದುಕೊಂಡರು,ಯಾವುದೇ ಜಾಗದಲ್ಲಿದ್ದರು ಅದರಲ್ಲಿ ವಿಶೇಷವಾಗಿ ಸಾಧನೆ ಮಾಡಬೇಕು.

ನಮ್ಮಲ್ಲಿ ನಾವು ಮೌಲ್ಯಯುತವನ್ನು ತೊಡಗಿಸಿಕೊಳ್ಳಬೇಕು.ನಮ್ಮ ಬಗ್ಗೆ ನಾವು ಅನುಮಾನ ಪಡಬಾರದು, ಯಾರಿಗೂ, ಏನೇ ಆದರೂ ಹೆದರಬಾರದು ಆವಾಗ ಮಾತ್ರ ನಾವು ನಮ್ಮನ್ನು ನಾವು ಅರ್ಥ ಮಾಡಿಕೊಳ್ಳಲು ಸಾಧ್ಯವಿದೆ.ಜೀವನದಲ್ಲಿ ನಗು ನಗುತ್ತಾ ಇರಬೇಕು,ಖುಷಿ ಖುಷಿಯಿಂದ ಇರಬೇಕು, ಭಯವನ್ನು ಮೊದಲು ತೆಗೆದು ಹಾಕಿದಾಗ ಯಶಸ್ವಿನ ಶಿಖರವೇರಬಹುದು ಎಂದು ರಮೇಶ್ ಅರವಿಂದ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಎಕ್ಸೆಲ್ ಸುಂದರವಾದ ವಿದ್ಯಾಕೇಂದ್ರ, ಇಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವವರು ನಿಜವಾಗಿಯೂ ಭಾಗ್ಯವಂತರು.ನಮ್ಮ ಭವಿಷ್ಯ ನಮ್ಮ ಕೈಯಲೇ ಇದೇ ಹೊರತು ಬೇರಲ್ಲೂ ಇಲ್ಲಾ. ವಿದ್ಯಾರ್ಥಿಗಳು ಉತ್ತಮವಾಗಿ ಕಲಿತು ದೇಶಕ್ಕೆ ಶಕ್ತಿಯಾಗಬೇಕು‌ ಎಂದರು.ಸುಮಂತ್ ಕುಮಾರ್ ಒರ್ವ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ.ಅವರ ತ್ಯಾಗ,ಬದ್ದತೆ,ಇಚ್ಛಾಶಕ್ತಿಯಿಂದ ಇಂದು ಎಕ್ಸೆಲ್ ವಿಜೃಂಬಿಸುತ್ತಿದೆ ಎಂದರು.

Related posts

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya
error: Content is protected !!