22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆ, ಬೆಳ್ತಂಗಡಿ ಇವರ ಎಕ್ಸೆಲ್ ಅಕ್ಷರೋತ್ಸವ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಕವನಗಳನ್ನು ಆಹ್ವಾನಿಸಲಾಗಿತ್ತು. ಸಾವಿರಕ್ಕಿಂತಲೂ ಮಿಗಿಲಾದ ಕವನಗಳು ಬಂದಿದ್ದು ಅದರಲ್ಲಿ ಆಯ್ದ 35 ಕವನಗಳಲ್ಲಿ ಪವಿತ್ರಾದಿನೇಶ್ ಇವರ “ಗೋಮಾತೆ” ಎಂಬ ಕವನವು ಆಯ್ಕೆಗೊಂಡಿರುವುದು ಶ್ಲಾಘನೀಯ. ನ.27 ರಂದು ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಇವರು ಭಾಗವಹಿಸಿ ಕವನವಾಚನ ಮಾಡಿದ್ದು ಎಕ್ಸೆಲ್ ವತಿಯಿಂದ ಅಭಿನಂದನಾ ಗೌರವವನ್ನು ಸ್ವೀಕರಿಸಿರುತ್ತಾರೆ.

ಇವರು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿಯಾಗಿದ್ದು ಶ್ರೀ ದಿನೇಶ್ ಇವರ ಪತ್ನಿಯಾಗಿದ್ದು ಪ್ರಸ್ತುತ ಪುತ್ತೂರು ತಾಲೂಕಿನ ಸ.ಹಿ.ಪ್ರಾ ಶಾಲೆ ಬಜತ್ತೂರು, ವಳಾಲು ಇಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಯಕ್ಷಕಲಾವಿದ ವಸಂತ ಗೌಡ ಕಾಯರ್ತಡ್ಕ ಕಲಾಯಾನ ಸ್ವರ್ಣ ಸಂಭ್ರಮ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ವಿಶ್ವ ವೈದ್ಯರ ದಿನಾಚರಣೆ: ಉಪ್ಪಿನಂಗಡಿಯ ವೈದ್ಯರಿಗೆ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಗೌರವಾರ್ಪಣೆ

Suddi Udaya

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!