25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆ, ಬೆಳ್ತಂಗಡಿ ಇವರ ಎಕ್ಸೆಲ್ ಅಕ್ಷರೋತ್ಸವ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಕವನಗಳನ್ನು ಆಹ್ವಾನಿಸಲಾಗಿತ್ತು. ಸಾವಿರಕ್ಕಿಂತಲೂ ಮಿಗಿಲಾದ ಕವನಗಳು ಬಂದಿದ್ದು ಅದರಲ್ಲಿ ಆಯ್ದ 35 ಕವನಗಳಲ್ಲಿ ಪವಿತ್ರಾದಿನೇಶ್ ಇವರ “ಗೋಮಾತೆ” ಎಂಬ ಕವನವು ಆಯ್ಕೆಗೊಂಡಿರುವುದು ಶ್ಲಾಘನೀಯ. ನ.27 ರಂದು ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಇವರು ಭಾಗವಹಿಸಿ ಕವನವಾಚನ ಮಾಡಿದ್ದು ಎಕ್ಸೆಲ್ ವತಿಯಿಂದ ಅಭಿನಂದನಾ ಗೌರವವನ್ನು ಸ್ವೀಕರಿಸಿರುತ್ತಾರೆ.

ಇವರು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿಯಾಗಿದ್ದು ಶ್ರೀ ದಿನೇಶ್ ಇವರ ಪತ್ನಿಯಾಗಿದ್ದು ಪ್ರಸ್ತುತ ಪುತ್ತೂರು ತಾಲೂಕಿನ ಸ.ಹಿ.ಪ್ರಾ ಶಾಲೆ ಬಜತ್ತೂರು, ವಳಾಲು ಇಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಣಿ-ವಿಕಸಿತ ಭಾರತ ಸಂಕಲ್ಪ ಸಭೆ

Suddi Udaya
error: Content is protected !!