ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

ಕೊಯ್ಯೂರು ಕಸಬ ಉನ್ನತೀ ಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ದ್ವಿಭಾಷಾ ಮಾಧ್ಯಮದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು.

ಉದ್ಘಾಟನೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಜಗನ್ನಾಥ ಮತ್ತು ಒಂದನೇ ತರಗತಿ ವಿದ್ಯಾರ್ಥಿಗಳು ಜಂಟಿಯಾಗಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ, ಗ್ರಾಮ ಪಂಚಾಯತ್ ಸದಸ್ಯ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಿರೀಶ್ ಆಚಾರ್ಯ, ಮರಿಯ ಹಾಗೂ ತಾಯoದಿರ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯಂತಿ ಉಪಸ್ಥಿತರಿದ್ದರು. ಸಂಸ್ಥೆಯ ಪೋಷಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಆಂಗ್ಲ ಮಾಧ್ಯಮದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವಂತೆ ಕೋರಲಾಯಿತು.

ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ಕನ್ನಡ, ಇಂಗ್ಲೀಷ್ ಎರಡೂ ಮಾಧ್ಯಮಗಳಲ್ಲೂ ಶಿಕ್ಷಣವನ್ನು ನೀಡುವುದರ ಬಗ್ಗೆ ಮಾಹಿತಿ ನೀಡಲಾಯಿತು. ಸಂಸ್ಥೆಯಲ್ಲಿ ಸರ್ಕಾರದಿಂದ ನೀಡಲ್ಪಟ್ಟ ಪ್ರಯೋಜನವನ್ನು ಪಡೆದುಕೊಂಡು ಸಂಸ್ಥೆಯ ಅಸ್ತಿತ್ವವನ್ನು ಕಾಪಾಡುವಂತೆ ಕರೆನೀಡಲಾಯಿತು. ವಿದ್ಯಾರ್ಥಿಗಳಾದ ನಿಶ್ಚಿತ, ಪ್ರಾರ್ಥನ, ವರ್ಷ, ಪ್ರಾರ್ಥನೆಗೈದರು. ಮುಖ್ಯ ಶಿಕ್ಷಕಿ ವಸಂತಿ ಕೆ. ಎನ್. ಸ್ವಾಗತಿಸಿ, ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ದೇವಿಬಾಯಿ ಡಿ. ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯರಾದ ಶ್ರೀಮತಿ ವಿಜಯಶ್ರೀ ಮತ್ತು ಶ್ರೀಮತಿ ವೇದಾವತಿ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya
error: Content is protected !!