23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಆತಿಥ್ಯದಲ್ಲಿ The Institute of Chartered Accountants of India (ICAI) ಇದರ Committee on Career Counselling ವತಿಯಿಂದ CAFY & Super Mega Career Counselling Programme (CAFY 4.0) ಅನ್ನು ನ. 27 ರಂದು ಕಾಲೇಜಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಅಖಿಲ ಭಾರತ ಮಟ್ಟದ ಸಿಎ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಿ ಸಿ.ಎ ಆಕಾಶದೀಪ್ ಪೈ (Counsellor) ಹಾಗೂ ಸಿ.ಎ ನಿತಿನ್ ಬಾಳಿಗ (SICASA Chairman, Mangaluru Branch of SIRC of ICAI)ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಸಿಎ ವೃತ್ತಿಪರ ಶಿಕ್ಷಣದ ಅವಕಾಶಗಳು, ಪರೀಕ್ಷಾ ಹಂತಗಳು ಹಾಗೂ ವಾಣಿಜ್ಯ ಕ್ಷೇತ್ರದಲ್ಲಿ ಇರುವ ಭವಿಷ್ಯದ ಸಾಧ್ಯತೆಗಳ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸಿಎ ಆಗಬೇಕೆಂಬ ಕನಸಿನ ಜೊತೆಗೆ ನಿರಂತರ ಪ್ರಯತ್ನ ಮತ್ತು ಅಧ್ಯಯನಶೀಲತೆಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಸಿಎ ಆಕಾಶದೀಪ ಪೈ ಕರೆ ನೀಡಿದರು.

ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷರಾದ ಎಚ್. ಪದ್ಮಗೌಡ ಅವರು ಉದ್ಘಾಟನೆ ಮಾಡಿ, ವಿದ್ಯಾರ್ಥಿಗಳು ತಮ್ಮ ಗುರಿಗಳನ್ನು ಸ್ಪಷ್ಟಗೊಳಿಸಿಕೊಂಡು ಭವಿಷ್ಯ ನಿರ್ಮಾಣದಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಅವರು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶಂಕರ್ ರಾವ್ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya
error: Content is protected !!