25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

ಉಜಿರೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕರ ಮಗಳು ಅನುಪಮಾ ಹಾಗೂ ಖ್ಯಾತ ವಕೀಲ ಧನಂಜಯ್ ರಾವ್ ರವರ ಮಗ ಮಿಹಿರ್ ರವರ ವಿವಾಹ ಹಿನ್ನಲೆಯಲ್ಲಿ ನ.28ರಂದು ಉಜಿರೆಯ ಪ್ರತಾಪ ಸಿಂಹ ನಾಯಕ್ ರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ನವವಿವಾಹಿತರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿ.ಪ.ಸದಸ್ಯ ಡಾ.ಧನಂಜಯ ಸರ್ಜಿ, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಬೆಳ್ತಂಗಡಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್, ಉಜಿರೆ ಗ್ರಾ.ಪಂ.ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾ‌ರ್, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಉದ್ಯಮಿಗಳಾದ ರಾಜೇಶ್ ಪೈ, ಲಕ್ಷ್ಮಣ ಸಪಲ್ಯ, ಭರತ್, ರವಿಚಕ್ಕಿತ್ತಾಯ, ಉಜಿರೆ ಮಾಜಿ ಗ್ರಾ.ಪಂ.ಅಧ್ಯಕ್ಷೆ ಪುಷ್ಪವತಿ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.ಭೇಟಿಯ ವೇಳೆ ಉಜಿರೆಯಲ್ಲಿ ಸ್ಥಳಾಂತರಗೊಂಡು ಉದ್ಘಾಟನೆಗೊಂಡ ರಮ್ಯ ಒನ್ ಗ್ರಾಂ ಗೋಲ್ಡ್ ಮಳಿಗೆಗೆ ಭೇಟಿ ನೀಡಿದರು. ತದ ಬಳಿಕ ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿ, ಗೌರವ ಸ್ವೀಕರಿಸಿದರು.

Related posts

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya
error: Content is protected !!