July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

ಉಜಿರೆ: ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕಗಳನ್ನು ಕಂಠ ಪಾಠ ಮಾಡಿ ಎಳೆಯ ವಯಸ್ಸಿನಲ್ಲಿ ಅಭೂತಪೂರ್ವ ಸಾಧನೆ ಮಾಡಿದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರ ಮನೆಗೆ ಹಿಂದೂ ಮುಖಂಡ ಡಿ.ಕಿರಣ್ ಚಂದ್ರ ಪುಷ್ಪಗಿರಿ ರವರು ನ.27ರಂದು ಭೇಟಿ ನೀಡಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪ್ರಮೋದ್ ಡಿಡುಪೆ, ಸತೀಶ್ ಕನ್ಯಾಡಿ, ಗಣೇಶ್ ಬೊಳಿಯೊಂಜಿ, ಕು.ಅದ್ವಿತಿ ರಾವ್ ರವರ ತಾಯಿ ಅಖಿಲಾ, ಸಹೋದರಿ ಉಪಸ್ಥಿತರಿದ್ದರು.

ಇವರು ಶೃಂಗೇರಿ ಜಗದ್ಗುರುಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆ 18 ಅಧ್ಯಾಯದ 700 ಶ್ಲೋಕಗಳ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಜ)ಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ. ಇವರ ಭಗವದ್ಗೀತೆಯ 18 ಅಧ್ಯಾಯದ ಪಠಣವು ಖಾಸಗಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರತಿ ಸೋಮವಾರ ನೇರ ಪ್ರಸಾರಗೊಂಡಿತ್ತು. ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಭಗವದ್ಗೀತಾ ಕಂಠಪಾಠ ಪಠಣ (ಎರಡು ಅಧ್ಯಾಯ)ವನ್ನು ಮಾಡಿರುತ್ತಾರೆ. ಪ್ರಸ್ತುತ ಇವರು ಯಕ್ಷಭಾರತಿ ಕನ್ಯಾಡಿ ಸಂಸ್ಕಾರ ಶಿಕ್ಷಣದ ವಿದ್ಯಾರ್ಥಿನಿಯಾಗಿದ್ದು, ಇದಲ್ಲದೆ ವಿಧುಷಿ ಪ್ರಿಯ ಸತೀಶ್ ರವರಲ್ಲಿ ಭರತನಾಟ್ಯ ಅಭ್ಯಾಸ, ವಿಧುಷಿ ಶ್ಯಾಮಲ ನಾಗರಾಜ್ ರವರಲ್ಲಿ ಶಾಸ್ತ್ರೀಯ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya
error: Content is protected !!