30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆಗಾಗಿ ಡಿ. 03 ರಂದು ಮಂಗಳೂರಿನ ಕೋಣಾಜೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಬೆಳ್ತಂಗಡಿಯ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಅತಿ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷ ಜಯ ವಿಕ್ರಂ ಕಲ್ಲಾಪು ಮನವಿ ಮಾಡಿದರು. ಇದೊಂದು ಐತಿಹಾಸಿಕ ಸಮಾರಂಭ ಸಮಾಜದ ಪ್ರತಿಯೊಬ್ಬರು ಸಮಾಜದ ಹಬ್ಬವೆಂದು ಪರಿಗಣಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆಯವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಜಿತ ವಿ ಬಂಗೇರ, ಮಾಜಿ ಅಧ್ಯಕ್ಷ ಜಯರಾಮ್ ಬಂಗೇರ, ಚಿದಾನಂದ ಎಲ್ದಕ್ಕ, ಉಪಾಧ್ಯಕ್ಷ ಸುಂದರ ಪೂಜಾರಿ, ಮಹಿಳಾ ಸಂಘದ ಅಧ್ಯಕ್ಷ ಸುಮಾ ಪ್ರಮೋದ್, ಕಾರ್ಯದರ್ಶಿ ನಿತೇಶ್ ಕುಮಾರ್ ವೇಣೂರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್ ಕೆ ಪ್ರಸಾದ್, ಯುವ ವಾಹಿನಿ ಅಧ್ಯಕ್ಷ ಗುರು ರಾಜ್ ಗುರಿಪಳ್ಳ, ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya
error: Content is protected !!