25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರಿನ 9ನೇ ತರಗತಿಯ ವಿದ್ಯಾರ್ಥಿನಿ ಧನುಶ್ರೀ ಎಸ್. ಕುಲಾಲ್ ಅವರಿಗೆ ಕರ್ನಾಟಕ ರಾಜ್ಯ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯಮಟ್ಟದಲ್ಲಿ ಎರಡು ಹಂತಗಳಲ್ಲಿ ಈ ಸ್ಪರ್ಧೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜಿಲ್ಲಾ ಹಂತಗಳಿಂದ ಆಯ್ಕೆಯಾದ ಒಟ್ಟು 106 ಸ್ಪರ್ಧಾಳುಗಳಲ್ಲಿ ಮೊದಲ ಹಂತದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪ್ರತಿ ವಿಭಾಗದಿಂದ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ನಂತರ ಅವರಿಗೆ ಎರಡನೇ ಹಂತದಲ್ಲಿ 12 ತೀರ್ಪುಗಾರರ ಸಮ್ಮುಖದಲ್ಲಿ ಅಂತಿಮ ಸ್ಪರ್ಧೆ ನಡೆದು ಧನುಶ್ರೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಕರ್ನಾಟಕ ಸರಕಾರದ ರಾಜ್ಯವಸ್ತು‌ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ನಡೆದ ಪ್ರೌಢಶಾಲಾ ವಿಭಾಗದ ದ.ಕ. ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಇವರು ಪ್ರಥಮ ಸ್ಥಾನ ಪಡೆದಿದ್ದರು.
ಇವರು ಬೆಳ್ತಂಗಡಿ ತಾಲೂಕಿನ ಪಿಲ್ಯದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಯ ಪುತ್ರಿ.

Related posts

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya
error: Content is protected !!