July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರಿನ 9ನೇ ತರಗತಿಯ ವಿದ್ಯಾರ್ಥಿನಿ ಧನುಶ್ರೀ ಎಸ್. ಕುಲಾಲ್ ಅವರಿಗೆ ಕರ್ನಾಟಕ ರಾಜ್ಯ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯಮಟ್ಟದಲ್ಲಿ ಎರಡು ಹಂತಗಳಲ್ಲಿ ಈ ಸ್ಪರ್ಧೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜಿಲ್ಲಾ ಹಂತಗಳಿಂದ ಆಯ್ಕೆಯಾದ ಒಟ್ಟು 106 ಸ್ಪರ್ಧಾಳುಗಳಲ್ಲಿ ಮೊದಲ ಹಂತದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪ್ರತಿ ವಿಭಾಗದಿಂದ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ನಂತರ ಅವರಿಗೆ ಎರಡನೇ ಹಂತದಲ್ಲಿ 12 ತೀರ್ಪುಗಾರರ ಸಮ್ಮುಖದಲ್ಲಿ ಅಂತಿಮ ಸ್ಪರ್ಧೆ ನಡೆದು ಧನುಶ್ರೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಕರ್ನಾಟಕ ಸರಕಾರದ ರಾಜ್ಯವಸ್ತು‌ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ನಡೆದ ಪ್ರೌಢಶಾಲಾ ವಿಭಾಗದ ದ.ಕ. ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಇವರು ಪ್ರಥಮ ಸ್ಥಾನ ಪಡೆದಿದ್ದರು.
ಇವರು ಬೆಳ್ತಂಗಡಿ ತಾಲೂಕಿನ ಪಿಲ್ಯದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಯ ಪುತ್ರಿ.

Related posts

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!