July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

ಉರುವಾಲು : ದ.ಕ. ಜಿ.ಪಂ. ಕಿ . ಪ್ರಾ . ಶಾಲೆ ನೆಕ್ಕಿಲು ಇಲ್ಲಿನ ಮುಖ್ಯ ಶಿಕ್ಷಕರಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಇವರ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು .

ಅಧ್ಯಕ್ಷತೆಯನ್ನು ಎಸ್ . ಡಿ .ಎಂ .ಸಿ ಅಧ್ಯಕ್ಷ ಅಬ್ದುಲ್ ಶರೀಫ್ ವಹಿಸಿದ್ದರು. ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ್ ಮಡಿವಾಳ ಮಾತನಾಡುತ್ತಾ ಬಿರಾದಾರ್ ಒಬ್ಬರು ಈ ಶಾಲೆಯಲ್ಲಿ 21 ವರ್ಷ ಶಿಕ್ಷಕರಾಗಿ ಅನುಪಮಾ ಸಾಧನೆ ಮಾಡಿ ಊರವರ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದಾರೆ ಎಂದರು.

ವೇದಿಕೆಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾದ ಪ್ರಭಾಕರ ಹೆಗ್ಡೆ ಮಸೀದಿಯ ಮುಖ್ಯ ಗುರುಗಳಾದ ಉಮರುಲ್ ಫಾರೂಕ್ ಸಖಾಫಿ , ಊರ ದಾನಿಗಳಾದ ಪದ್ಮನಾಭ ಶಿಲ್ಪಿಗಳು, ನಿರುಪಮ .ಎಸ್ .ಆಳ್ವ ,ಕಾಸಿಮ್ ಬಳ್ಳಿ ,ಹನೀಫ್ ಮಿಸ್ಟಾ ಯಿ , ಗ್ರಾ. ಪಂಚಾಯತು ಸದಸ್ಯರಾದ ಸುಮತಿ ಜನಾರ್ಧನ ,ಮಾಜಿ ಎಸ್ ಡಿ.ಎಂ.ಸಿ ಸದಸ್ಯರಾದ ಜಯರಾಮ ನಾಯ್ಕ, ಜನಾರ್ದನ ನಾಯ್ಕ, ವಾಸಪ್ಪ ಗೌಡ, ಮೈ ರೋಳ್ತಡ್ಕ ಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರವತಿ, ಸಿ.ಆರ್ . ಪಿ, ಮೊಹಮ್ಮದ್ ಶರೀಫ್ ಕೆ .ಸಿ .ಮಾಜಿ ಸಿ.ಆರ್ . ಪಿ. ಸಂಧ್ಯಾ, ಕುಪ್ಪೆಟ್ಟಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವನಿತ, ಪುತ್ತಿಲ ಮುಖ್ಯ ಶಿಕ್ಷಕರಾದ ಶಿವಸ್ವಾಮಿ, ಪಿಲಿಗೋಡು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಚಂದ್ರಕ್ಕಿ ಮಾಜಿ ಪಂಚಾಯತ್ ಸದಸ್ಯರಾದ ಅಬ್ದುಲ್ ಸುಕುರು, ಸಮಾಜ ಸೇವಕರಾದ ತಣ್ಣೀರುಪಂತ ಸಿ.ಎ ಬ್ಯಾಂಕ್ ನಿರ್ದೇಶಕರಾದ ಸುರೇಶ್ ಎಚ್ ಎಲ್ ಉಪಸ್ಥಿತರಿದ್ದರು .

ಶ್ರೀಮತಿ ಚಂದ್ರಕ್ಕಿ ಬಿರಾದಾರ್ ಶಿಕ್ಷಕ ದಂಪತಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಊರಿನ ಗಣ್ಯರಾದ ಯಶೋಧರ ಎಚ್, ಸುಂದರಿ, ಭಾರತಿ .ಕೆ .ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ,ಹಳೆ ವಿದ್ಯಾರ್ಥಿಗಳು, ಕುಪ್ಪೆಟ್ಟಿ ಮತ್ತು ಕರಾಯ ಕ್ಲಸ್ಟರ್ ನ ಶಿಕ್ಷಕರು, ಉಪಸ್ಥಿತರಿದ್ದರು.


ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಮುಖ್ಯ ಶಿಕ್ಷಕರಾದ ಸಂಧ್ಯಾ ರಾಣಿ .ಕೆ. ಪ್ರಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಸಹ ಶಿಕ್ಷಕಿಯರಾದ ಲೀಲಾವತಿ. ಡಿ. ಎಸ್. ನಿರೂಪಿಸಿ, ಗೌರವ ಶಿಕ್ಷಕಿಯಾದ ವಿನಯ ವಂದನಾರ್ಪಣೆಗೈದರು

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya
error: Content is protected !!