25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಮ್ಮ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ಮಕ್ಕಳ ಹಿತಾಸಕ್ತಿಗಾಗಿ ತೆರೆದುಕೊಳ್ಳುತ್ತಿರುವ ಲಕ್ಷ್ಯ ಸಂಸ್ಥೆಗಳಿಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಯೋಗರಾಜ್ ಭಟ್ ಇವರು ನೂತನ ಸಂಸ್ಥೆಗೆ ಶುಭ ಹಾರೈಸಿದರು.

ಬೊಳ್ವಾರು ಬೈಪಾಸ್ ರಸ್ತೆಯ ಪ್ರಾರಂಭದಲ್ಲಿ ಪ್ರಾರ್ಥನಾ ಗಾರ್ಡನ್ಸ್ ಹೋಟೆಲ್ ಮುಂಭಾಗದಲ್ಲಿರುವ ರವಿಂದ್ರ ಕಾಂಪ್ಲೆಕ್ಸ್ ನಲ್ಲಿರುವ ಲಕ್ಷ್ಯ ಡೇ ಕೇರ್ ಸಂಸ್ಥೆಯು ಇದೇ ಜನವರಿಯಲ್ಲಿ ಅನಾವರಣಗೊಳ್ಳುತ್ತಿದ್ದು, ಒಂದು ವರ್ಷದಿಂದ ನಾಲ್ಕು ವರ್ಷದ ಮಕ್ಕಳಿಗಾಗಿ ಶಿಶು ಶಿಕ್ಷಣ ತಜ್ಞರಿಂದ ಹಾಗೂ ಮನಃಶಾಸ್ತ್ರಜ್ಞರಿಂದಲೇ ನಡೆಸಲ್ಪಡುತ್ತಿದ್ದು ಪ್ರತಿ ಶಿಶುವಿನ ವೈಯಕ್ತಿಕ ಬೆಳವಣಿಗೆಯ ಮೇಲೆ ಗಮನವಿರಿಸಿ ಪೌಷ್ಟಿಕ ಆಹಾರವನ್ನು ಉಚಿತವಾಗಿ ನೀಡುತ್ತಿದೆ. ಇದು ಉದ್ಯೋಗಕ್ಕಾಗಿ ತೆರಳುವ ಪಾಲಕರಿಗೆ ಬಹು ಅನುಕೂಲಕರವಾಗಿದ್ದು ಸಂಶೋಧಿತ ಶೈಕ್ಷಣಿಕ ಚಟುವಟಿಕೆ ಆಟಗಳನ್ನು ಹೊಂದಿರುತ್ತದೆ. ಪ್ರತಿ ಶಿಶುವಿಗೂ ಹಾಗೂ ಪಾಲಕರಿಗೂ ವೈದ್ಯರ ಸಲಹೆ ಆಧಾರಿತ ಆಪ್ತಸಲಹೆ ಮತ್ತು ಮಾರ್ಗದರ್ಶನದ ಲಭ್ಯವಿರುತ್ತದೆ. ಈಗಾಗಲೇ ದಾಖಲಾತಿ ಆರಂಭವಾಗಿದ್ದು ತಾಲೂಕಿನ ಪಾಲಕರಿಗೆ ಇದರ ಪ್ರಯೋಜನವನ್ನು ಪಡೆಯಲು ಸಂಸ್ಥೆ ವಿನಂತಿಸಿಕೊಂಡಿರುತ್ತದೆ.

ಇದರೊಂದಿಗೆ ಸಂಪೂರ್ಣ ಜೀವನಾಧಾರಿತ ಕೌನ್ಸೆಲಿಂಗ್ ಸೌಲಭ್ಯವನ್ನು ಲಕ್ಷ್ಯ ಒದಗಿಸುತ್ತಿದೆ. ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಅಡೆತಡೆಗಳನ್ನು ನಿವಾರಿಸಲು ಎಜುಕೇಷನಲ್ ಕೌನ್ಸೆಲಿಂಗ್ ಸೌಲಭ್ಯ ಇರುವುದು. ಇದರಿಂದ ಮಕ್ಕಳಲ್ಲಿ ಯಾವುದೇ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮಾರ್ಗದರ್ಶನ ಪಡೆಯಲು ಸಾಧ್ಯವಿದೆ. ಜೊತೆಗೆ ಗರ್ಭಿಣಿಯರಿಗೆ, ಶಿಶುಗಳಿಗೆ, ಶಿಶು ಆರೈಕೆಗೆ, ಹದಿಹರೆಯದ ಯುವ ಮನಸ್ಸುಗಳಿಗೆ ಹಾಗೂ ವಯಸ್ಕರಿಗೆ ವಿಶೇಷ ಕೌನ್ಸೆಲಿಂಗ್ ಸೌಲಭ್ಯ ಇರುತ್ತದೆ. ಈ ಸಂಸ್ಥೆಯು ಪುತ್ತೂರಿನ ದುರ್ಗಾಪರಮೇಶ್ವರ ಭಟ್ ಹಾಗೂ ಶ್ರೀಮತಿ ಅರ್ಪಿತಾ ಭಟ್ ಇವರ ನೇತೃತ್ವದಲ್ಲಿ ನಡೆಯುತ್ತಿದೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya
error: Content is protected !!