July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆಗಾಗಿ ಡಿ. 03 ರಂದು ಮಂಗಳೂರಿನ ಕೋಣಾಜೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಬೆಳ್ತಂಗಡಿಯ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನಿಂದ ಅತಿ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷ ಜಯ ವಿಕ್ರಂ ಕಲ್ಲಾಪು ಮನವಿ ಮಾಡಿದರು. ಇದೊಂದು ಐತಿಹಾಸಿಕ ಸಮಾರಂಭ ಸಮಾಜದ ಪ್ರತಿಯೊಬ್ಬರು ಸಮಾಜದ ಹಬ್ಬವೆಂದು ಪರಿಗಣಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆಯವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಜಿತ ವಿ ಬಂಗೇರ, ಮಾಜಿ ಅಧ್ಯಕ್ಷ ಜಯರಾಮ್ ಬಂಗೇರ, ಚಿದಾನಂದ ಎಲ್ದಕ್ಕ, ಉಪಾಧ್ಯಕ್ಷ ಸುಂದರ ಪೂಜಾರಿ, ಮಹಿಳಾ ಸಂಘದ ಅಧ್ಯಕ್ಷ ಸುಮಾ ಪ್ರಮೋದ್, ಕಾರ್ಯದರ್ಶಿ ನಿತೇಶ್ ಕುಮಾರ್ ವೇಣೂರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್ ಕೆ ಪ್ರಸಾದ್, ಯುವ ವಾಹಿನಿ ಅಧ್ಯಕ್ಷ ಗುರು ರಾಜ್ ಗುರಿಪಳ್ಳ, ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
error: Content is protected !!