July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರಿನ 9ನೇ ತರಗತಿಯ ವಿದ್ಯಾರ್ಥಿನಿ ಧನುಶ್ರೀ ಎಸ್. ಕುಲಾಲ್ ಅವರಿಗೆ ಕರ್ನಾಟಕ ರಾಜ್ಯ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯಮಟ್ಟದಲ್ಲಿ ಎರಡು ಹಂತಗಳಲ್ಲಿ ಈ ಸ್ಪರ್ಧೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜಿಲ್ಲಾ ಹಂತಗಳಿಂದ ಆಯ್ಕೆಯಾದ ಒಟ್ಟು 106 ಸ್ಪರ್ಧಾಳುಗಳಲ್ಲಿ ಮೊದಲ ಹಂತದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪ್ರತಿ ವಿಭಾಗದಿಂದ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ನಂತರ ಅವರಿಗೆ ಎರಡನೇ ಹಂತದಲ್ಲಿ 12 ತೀರ್ಪುಗಾರರ ಸಮ್ಮುಖದಲ್ಲಿ ಅಂತಿಮ ಸ್ಪರ್ಧೆ ನಡೆದು ಧನುಶ್ರೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಕರ್ನಾಟಕ ಸರಕಾರದ ರಾಜ್ಯವಸ್ತು‌ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ನಡೆದ ಪ್ರೌಢಶಾಲಾ ವಿಭಾಗದ ದ.ಕ. ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಇವರು ಪ್ರಥಮ ಸ್ಥಾನ ಪಡೆದಿದ್ದರು.
ಇವರು ಬೆಳ್ತಂಗಡಿ ತಾಲೂಕಿನ ಪಿಲ್ಯದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಯ ಪುತ್ರಿ.

Related posts

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya
error: Content is protected !!