September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಂದ್ರಪ್ರದೇಶ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಜು.26 ರಿಂದ ನ.18 ರ ಸಮಯದಲ್ಲಿ ಬಲತ್ಕಾರದಿಂದ ಹಲವು ಭಾರಿ ಅತ್ಯಾಚಾರ ಮಾಡಿ ಎರಡು ತಿಂಗಳ ಗರ್ಭಿಣಿ ಮಾಡಿದ ಪ್ರಕರಣ ಸಂಬಂಧ ಅಪ್ರಾಪ್ತ ಬಾಲಕಿಯ ಸಂಬಂಧಿ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ‌‌.

ವೇಣೂರು ಪೊಲೀಸ್ ಠಾಣೆಯಲ್ಲಿ ನ.25 ರಂದು ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿ ಅಮ್ಜತ್ ಖಾನ್(18) ವಿರುದ್ಧ ಕಲಂ 64 , BNS -2023 ಮತ್ತು 4,6 ಪೋಕ್ಸೋ ಕಾಯ್ದೆ 2012 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ‌.ಬಿ.ಎಸ್ ನೇತೃತ್ವದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಮತ್ತು ಸಬ್ ಇನ್ಸ್‌ಪೆಕ್ಟರ್ ಓಮನ ತಂಡ ಆರೋಪಿ ಅಮ್ಜತ್ ಖಾನ್ (18) ಎಂಬಾತನನ್ನು ನ.27 ರಂದು ಸಂಜೆ ವೇಣೂರು ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಆರೋಪಿಯನ್ನು ನ.28 ರಂದು ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!