23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

ಉಜಿರೆ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಹಾಗೂ ರಾಜ್ಯದ ರಬ್ಬರ್ ವ್ಯವಹಾರ ಮಾಡುವ ಸಹಕಾರ ಸಂಘಗಳ ಆಶ್ರಯದಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ-2025 ನ.29 ರಂದು ಉಜಿರೆಯ ಶ್ರೀಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು.

ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ ರಬ್ವರು ಬೆಳೆಗಾರರ ಸಮ್ಮೇಳನ ಉದ್ಘಾಟಿಸಿ ದ.ಕ ಜಿಲ್ಲೆಯ ಕೃಷಿಕರ ಜೊತೆ ನಾವು ನಿಲ್ಕುತ್ತೇವೆ ಎಂದರು‌.

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶ್ರೀಧರ್ ಜಿ ಬಿಢೆ ವಹಿಸಿದ್ದರು.

ಹಿರಿಯ ಅರ್ಥಶಾಸ್ತ್ರಜ್ಞ ಡಾ.ವಿಘ್ನೇಶ್ವರ ವರ್ಮುಡಿ ದಿಕ್ಸೂಚಿ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್,ರಬ್ಬರ್ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್ ಗುತ್ತಿಗಾರು, ಕರ್ನಾಟಕ ರಾಜ್ಯ ರಬ್ಬರು ವ್ಯಾಪಾರಿಗಳ ಸಂಘದ ಅಧ್ಯಕ್ಷ ಶಾಜಿ ಯು.ವಿ., ಎಸ್‌ಕೆಡಿಆರ್‌ಡಿಪಿ ಬಿ.ಸಿ. ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಬ್ಬರು ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ ಭಿಡೆ ಸ್ವಾಗತಿಸಿದರು. ರಬ್ಬರ್ ಸೊಸೈಟಿ ಉಪಾಧ್ಯಕ್ಷ, ಸಮ್ಮೇಳನ ಸಂಯೋಜಕ ಅನಂತ ಭಟ್ ಮಚ್ಚಿಮಲೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ, ಕಾರ್ಯದರ್ಶಿ ವಿಜಯ ಕೃಷ್ಣ ಸುಳ್ಯ, ಉಪಾಧ್ಯಕ್ಷರುಗಳಾದ ನಿತ್ಯಾನಂದ ಮುಂಡೋಡಿ ಸುಳ್ಯ, ಪ್ರಸಾದ್ ಕೌಶಲ್ ಶೆಟ್ಟಿ, ಗೋಪಾಲಕೃಷ್ಣ ಭಟ್, ನಿರ್ದೇಶಕರಾದ ಜಯಶ್ರೀ ಡಿ.ಎಂ. ಗೌಡ, ತಿಮ್ಮಪ್ಪ ಗೌಡ ಬೆಳಾಲು, ಬಾಲಕೃಷ್ಣ ಗೌಡ ಕೇರಿಮಾರ್, ಹೆಚ್ ಪದ್ಮ ಗೌಡ ಬೆಳ್ತಂಗಡಿ, ಅಬ್ರಾಹಂ ವಿ.ಎಸ್. ಕಳೆಂಜ, ಭರತ್ ಕುಮಾರ್ ಬಂಗಾಡಿ, ಕೆ.ಜೆ. ಆಗಸ್ಟೀನ್, ಶಾಜಿ, ಹರೀಶ್ ರಾವ್ ಕಳೆಂಜ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!