23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

ಬೆಳ್ತಂಗಡಿ: ತಾಲೂಕಿನಲ್ಲಿ ಜನರ ಬಳಿ ಆಡಳಿತವನ್ನು ಕೊಂಡೊಯ್ದು ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದ್ದು ನ.29ರಂದು ತಾಲೂಕಿನ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜ ಗ್ರಾಮ ಪಂಚಾಯತ್ ಸಭಾ ಭವನಗಳಲ್ಲಿ ಜರುಗಿತು.

ಜನರ ಸಮಸ್ಯೆಗಳಿಗೆ ಕಿವಿಕೊಡುವ ಕೆಲಸ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ನಡೆಯುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ಮಾಡುತ್ತಿದ್ದೇವೆ. ಇದುವರೆಗೆ 17 ಗ್ರಾಪಂ ಗಳಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಮುಂದಿನ ದಿನಗಳಲ್ಲಿ ಉಳಿದ ಪಂಚಾಯಿತಿಗಳಲ್ಲೂ ಮುಂದುವರೆಯಲಿದೆ” ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಹೆಚ್ಚಿನ ಗ್ರಾಮಸ್ಥರು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವಿಧ ಇಲಾಖಾಧಿಕಾರಿಗಳಿಂದ ತಮಗೆ ಬೇಕಾದ ಮಾಹಿತಿ ಪಡೆದರು ಹಾಗೂ ಸಾರ್ವಜನಿಕ ಸಮಸ್ಯೆ ಮತ್ತು ವೈಯ್ಯಕ್ತಿಕ ಸಮಸ್ಯೆಗಳಿಗೆ ಸಂಬಂಧ ಪಟ್ಟಂತಹ ಮನವಿಗಳನ್ನು ಸ್ವೀಕರಿಸಲಾಯಿತು.

ತಹಶಿಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya
error: Content is protected !!