July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

ಬೆಳ್ತಂಗಡಿ: ತಾಲೂಕಿನಲ್ಲಿ ಜನರ ಬಳಿ ಆಡಳಿತವನ್ನು ಕೊಂಡೊಯ್ದು ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದ್ದು ನ.29ರಂದು ತಾಲೂಕಿನ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜ ಗ್ರಾಮ ಪಂಚಾಯತ್ ಸಭಾ ಭವನಗಳಲ್ಲಿ ಜರುಗಿತು.

ಜನರ ಸಮಸ್ಯೆಗಳಿಗೆ ಕಿವಿಕೊಡುವ ಕೆಲಸ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ನಡೆಯುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ಮಾಡುತ್ತಿದ್ದೇವೆ. ಇದುವರೆಗೆ 17 ಗ್ರಾಪಂ ಗಳಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಮುಂದಿನ ದಿನಗಳಲ್ಲಿ ಉಳಿದ ಪಂಚಾಯಿತಿಗಳಲ್ಲೂ ಮುಂದುವರೆಯಲಿದೆ” ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಹೆಚ್ಚಿನ ಗ್ರಾಮಸ್ಥರು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವಿಧ ಇಲಾಖಾಧಿಕಾರಿಗಳಿಂದ ತಮಗೆ ಬೇಕಾದ ಮಾಹಿತಿ ಪಡೆದರು ಹಾಗೂ ಸಾರ್ವಜನಿಕ ಸಮಸ್ಯೆ ಮತ್ತು ವೈಯ್ಯಕ್ತಿಕ ಸಮಸ್ಯೆಗಳಿಗೆ ಸಂಬಂಧ ಪಟ್ಟಂತಹ ಮನವಿಗಳನ್ನು ಸ್ವೀಕರಿಸಲಾಯಿತು.

ತಹಶಿಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya
error: Content is protected !!