25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

ಕನ್ಯಾಡಿ: ಸೇವಾಭಾರತಿ ಕಾರ್ಯಾಲಯದ ಸೇವಾನಿಕೇತನ ಹೊಸ ಕಟ್ಟಡದ ವಾಸ್ತುಪೂಜೆಯು ನವೆಂಬರ್ 27 ರಂದು ಭಕ್ತಿಭಾವದಿಂದ ನೆರವೇರಿತು. ಅದರ ಮುಂದುವರೆದ ಕಾರ್ಯಕ್ರಮವಾಗಿ ನವೆಂಬರ್ 28 ರಂದು ನವೀನ ಕಟ್ಟಡದಲ್ಲಿ ಕಾರ್ಯಾಲಯ ಪ್ರವೇಶ ಹಾಗೂ ಆಶ್ಲೇಷ ಬಲಿ ಪ್ರಧಾನವಾಗಿ ನಡೆಯಿತು. ಸಾಯಂಕಾಲ 6.00 ಗಂಟೆಗೆ ದುರ್ಗಾಪೂಜೆ ಜರುಗಿತು

ಈ ವಿಶೇಷ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್, ಅನೇಕ ಗಣ್ಯರು, ಸಮಾಜಸೇವಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಭಜನೆಯ ಮೂಲಕ ದೇವರ ಸ್ತುತಿ ಕಾರ್ಯಕ್ರಮಕ್ಕೆ ಭಕ್ತಿಪರ ವಾತಾವರಣದ ಸೊಬಗು ಹೆಚ್ಚಿಸಿತು.

ಹೊಸ ಕಟ್ಟಡದ ಆರಂಭದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಪುನಶ್ಚೇತನವನ್ನು ಪಡೆದುಕೊಂಡು ಸ್ವಾವಲಂಬನೆಯತ್ತ ಸಾಗುವಂತೆ ಹಾಗೂ ಸೇವಾಭಾರತಿಯ ವಿವಿಧ ಸೇವಾಚಟುವಟಿಕೆಗಳು ಈ ಹೊಸ ಕಟ್ಟಡದ ಮೂಲಕ ಮತ್ತಷ್ಟು ಸಕ್ರಿಯವಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya
error: Content is protected !!