July 23, 2026
ಗ್ರಾಮಾಂತರ ಸುದ್ದಿ

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

ಕನ್ಯಾಡಿ: ಸೇವಾಭಾರತಿ ಕಾರ್ಯಾಲಯದ ಸೇವಾನಿಕೇತನ ಹೊಸ ಕಟ್ಟಡದ ವಾಸ್ತುಪೂಜೆಯು ನವೆಂಬರ್ 27 ರಂದು ಭಕ್ತಿಭಾವದಿಂದ ನೆರವೇರಿತು. ಅದರ ಮುಂದುವರೆದ ಕಾರ್ಯಕ್ರಮವಾಗಿ ನವೆಂಬರ್ 28 ರಂದು ನವೀನ ಕಟ್ಟಡದಲ್ಲಿ ಕಾರ್ಯಾಲಯ ಪ್ರವೇಶ ಹಾಗೂ ಆಶ್ಲೇಷ ಬಲಿ ಪ್ರಧಾನವಾಗಿ ನಡೆಯಿತು. ಸಾಯಂಕಾಲ 6.00 ಗಂಟೆಗೆ ದುರ್ಗಾಪೂಜೆ ಜರುಗಿತು

ಈ ವಿಶೇಷ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್, ಅನೇಕ ಗಣ್ಯರು, ಸಮಾಜಸೇವಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಭಜನೆಯ ಮೂಲಕ ದೇವರ ಸ್ತುತಿ ಕಾರ್ಯಕ್ರಮಕ್ಕೆ ಭಕ್ತಿಪರ ವಾತಾವರಣದ ಸೊಬಗು ಹೆಚ್ಚಿಸಿತು.

ಹೊಸ ಕಟ್ಟಡದ ಆರಂಭದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಪುನಶ್ಚೇತನವನ್ನು ಪಡೆದುಕೊಂಡು ಸ್ವಾವಲಂಬನೆಯತ್ತ ಸಾಗುವಂತೆ ಹಾಗೂ ಸೇವಾಭಾರತಿಯ ವಿವಿಧ ಸೇವಾಚಟುವಟಿಕೆಗಳು ಈ ಹೊಸ ಕಟ್ಟಡದ ಮೂಲಕ ಮತ್ತಷ್ಟು ಸಕ್ರಿಯವಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

Related posts

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

35 ವರ್ಷಗಳ ಸೇವೆಗೆ ಗೌರವದ ವಿದಾಯ-ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಗೆ ಆತ್ಮೀಯ ಬೀಳ್ಕೊಡುಗೆ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya
error: Content is protected !!