27.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ ಸಂಸದರಿಗೆ ಮನವಿಯನ್ನು ನೀಡಲಾಯಿತು. ಉಜಿರೆಯಲ್ಲಿ ನಡೆದ ರಾಜ್ಯ ರಬ್ಬರ್ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಸಂಸದರಿಗೆ ಮನವಿಯನ್ನು ಸಲ್ಲಿಸಲಾಯಿತು

ಈ ಸಂದರ್ಭ ಬಿಎಂಎಸ್ ರಾಜ್ಯ ಕಾರ್ಯದರ್ಶಿ, ಎ.ಜೈ ರಾಜ್ ಸಾಲಿಯಾನ್‌‌ ಕಾನರ್ಪ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಅಧ್ಯಕ್ಷರಾದ ರಘುಪತಿ ತೋಡಿಕಾನ, ಪ್ರಧಾನ ಕಾರ್ಯದರ್ಶಿ ಹರೀಶ್ ಜೆಕೆ,ಬಿಎಂಎಸ್ ತಾಲೂಕು ಸಮಿತಿ ಅದ್ಯಕ್ಷರಾದ ವಕೀಲರಾದ ಉದಯ ಬಿ.ಕೆ ಜಿಲ್ಲಾ ಪದಾಧಿಕಾರಿಗಳಾದ ಆನಂದ್ ರಾಜ್ ಅರುಣವರ್ಧನ್ ರಾಜಮಾಚಾರ್. ಮೋಹನ್ ಕುಮಾರ್ ನಾಗೇಂದ್ರ ನ್ ಸುರೇಂದ್ರ ಹರಿಶ್ಚಂದ್ರ ಮತ್ತು ವಿನಯ ಚಂದ್ರ ಕಿಲ್ಲೂರುಉಪಸ್ಥಿತರಿದ್ದರು.

ಸಮಾವೇಶದಲ್ಲಿ ಭಾಗವಹಿಸಿದ ರಬ್ಬರ್ ಮಂಡಳಿಯ ಹಿರಿಯ ಅಧಿಕಾರಿ ಪವಿತ್ರಂ ನಂಬಿಯಾರ್ ಅವರ ಮೂಲಕ ರಬ್ಬರ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ್ ಗೇಸನ್ ಅವರಿಗೆ ಕಾರ್ಮಿಕರ ವಿವಿಧ ಬೇಡಿಕೆಯ ಮನವಿಯನ್ನು ನೀಡಲಾಯಿತು. ಈಡ ಸಂದರ್ಭದಲ್ಲಿ ರಬ್ಬರ್ ಮಂಡಳಿಯ ನಿರ್ದೇಶಕರಾದ ಕೇಶವಪ್ರಸಾದ್ ಅವರಿಗೂ ಮನವಿಯನ್ನು ಸಲ್ಲಿಸಲಾಯಿತು

Related posts

ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya
error: Content is protected !!