ಕನ್ಯಾಡಿ: ಸೇವಾಭಾರತಿ ಕಾರ್ಯಾಲಯದ ಸೇವಾನಿಕೇತನ ಹೊಸ ಕಟ್ಟಡದ ವಾಸ್ತುಪೂಜೆಯು ನವೆಂಬರ್ 27 ರಂದು ಭಕ್ತಿಭಾವದಿಂದ ನೆರವೇರಿತು. ಅದರ ಮುಂದುವರೆದ ಕಾರ್ಯಕ್ರಮವಾಗಿ ನವೆಂಬರ್ 28 ರಂದು ನವೀನ ಕಟ್ಟಡದಲ್ಲಿ ಕಾರ್ಯಾಲಯ ಪ್ರವೇಶ ಹಾಗೂ ಆಶ್ಲೇಷ ಬಲಿ ಪ್ರಧಾನವಾಗಿ ನಡೆಯಿತು. ಸಾಯಂಕಾಲ 6.00 ಗಂಟೆಗೆ ದುರ್ಗಾಪೂಜೆ ಜರುಗಿತು

ಈ ವಿಶೇಷ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್, ಅನೇಕ ಗಣ್ಯರು, ಸಮಾಜಸೇವಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಭಜನೆಯ ಮೂಲಕ ದೇವರ ಸ್ತುತಿ ಕಾರ್ಯಕ್ರಮಕ್ಕೆ ಭಕ್ತಿಪರ ವಾತಾವರಣದ ಸೊಬಗು ಹೆಚ್ಚಿಸಿತು.
ಹೊಸ ಕಟ್ಟಡದ ಆರಂಭದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಪುನಶ್ಚೇತನವನ್ನು ಪಡೆದುಕೊಂಡು ಸ್ವಾವಲಂಬನೆಯತ್ತ ಸಾಗುವಂತೆ ಹಾಗೂ ಸೇವಾಭಾರತಿಯ ವಿವಿಧ ಸೇವಾಚಟುವಟಿಕೆಗಳು ಈ ಹೊಸ ಕಟ್ಟಡದ ಮೂಲಕ ಮತ್ತಷ್ಟು ಸಕ್ರಿಯವಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.











