25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

ಕನ್ಯಾಡಿ: ಸೇವಾಭಾರತಿ ಕಾರ್ಯಾಲಯದ ಸೇವಾನಿಕೇತನ ಹೊಸ ಕಟ್ಟಡದ ವಾಸ್ತುಪೂಜೆಯು ನವೆಂಬರ್ 27 ರಂದು ಭಕ್ತಿಭಾವದಿಂದ ನೆರವೇರಿತು. ಅದರ ಮುಂದುವರೆದ ಕಾರ್ಯಕ್ರಮವಾಗಿ ನವೆಂಬರ್ 28 ರಂದು ನವೀನ ಕಟ್ಟಡದಲ್ಲಿ ಕಾರ್ಯಾಲಯ ಪ್ರವೇಶ ಹಾಗೂ ಆಶ್ಲೇಷ ಬಲಿ ಪ್ರಧಾನವಾಗಿ ನಡೆಯಿತು. ಸಾಯಂಕಾಲ 6.00 ಗಂಟೆಗೆ ದುರ್ಗಾಪೂಜೆ ಜರುಗಿತು

ಈ ವಿಶೇಷ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್, ಅನೇಕ ಗಣ್ಯರು, ಸಮಾಜಸೇವಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಭಜನೆಯ ಮೂಲಕ ದೇವರ ಸ್ತುತಿ ಕಾರ್ಯಕ್ರಮಕ್ಕೆ ಭಕ್ತಿಪರ ವಾತಾವರಣದ ಸೊಬಗು ಹೆಚ್ಚಿಸಿತು.

ಹೊಸ ಕಟ್ಟಡದ ಆರಂಭದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಪುನಶ್ಚೇತನವನ್ನು ಪಡೆದುಕೊಂಡು ಸ್ವಾವಲಂಬನೆಯತ್ತ ಸಾಗುವಂತೆ ಹಾಗೂ ಸೇವಾಭಾರತಿಯ ವಿವಿಧ ಸೇವಾಚಟುವಟಿಕೆಗಳು ಈ ಹೊಸ ಕಟ್ಟಡದ ಮೂಲಕ ಮತ್ತಷ್ಟು ಸಕ್ರಿಯವಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

Related posts

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!