September 6, 2026
ಗ್ರಾಮಾಂತರ ಸುದ್ದಿ

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ


ಬೆಳ್ತಂಗಡಿ :ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಡ – ಕನ್ಯಾಡಿ ಗ್ರಾಮಗಳ ಶಕ್ತಿ ಕೇಂದ್ರ ಕಾರ್ಯಾಗಾರವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಜೈನ್ ಎಳನೀರು ಇವರ ಅಧ್ಯಕ್ಷತೆಯಲ್ಲಿ ನ 30ರಂದು ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಜರುಗಿತು.


ಈ ಕಾರ್ಯಾಗಾರದಲ್ಲಿ ಪಕ್ಷದ ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಲಾಳ್ ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಮಂಡಲದ ಉಪಾಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಭಾರಿಗಳಾದ ಸದಾನಂದ ಉಂಗಿಲ ಬೈಲು ಮುಂಬರುವ ಚುನಾವಣೆಗಳ ತಯಾರಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಮಂಡಲದ ಕೋಶಾಧಿಕಾರಿಗಳಾದ ಜಯಂತ್ ಗೌಡ ಗುರಿಪಳ್ಳ, ತಾಲೂಕು ಎಸ್ ಸಿ ಮೋರ್ಚದ ಅಧ್ಯಕ್ಷರಾದ ಈಶ್ವರ ಭೈರ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದಕುಮಾರ್ ಲಾಯಿಲ ಉಪಸ್ಥಿತರಿದ್ದರು. ಶಕ್ತಿ ಕೇಂದ್ರದ ಪ್ರಮುಖರಾದ ವಿಜಯ ಗೌಡ ಸ್ವಾಗತಿಸಿ ಧನ್ಯವಾದವಿತ್ತರು.
ಈ ಸಂದರ್ಭ ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ, ಪಂಚಾಯತ್ ಸಧಸ್ಯರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿ ಸದಸ್ಯರುಗಳು, ca ಬ್ಯಾಂಕ್ ಹಾಲಿನ ಸೊಸೈಟಿ ನಿರ್ದೇಶಕರು ಗಳು,ಹಿರಿಯರು ಹಾಗೂ ಪಕ್ಷದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

Suddi Udaya

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!