July 23, 2026
ಗ್ರಾಮಾಂತರ ಸುದ್ದಿ

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

ಕನ್ಯಾಡಿ: ಸೇವಾಭಾರತಿ ಕಾರ್ಯಾಲಯದ ಸೇವಾನಿಕೇತನ ಹೊಸ ಕಟ್ಟಡದ ವಾಸ್ತುಪೂಜೆಯು ನವೆಂಬರ್ 27 ರಂದು ಭಕ್ತಿಭಾವದಿಂದ ನೆರವೇರಿತು. ಅದರ ಮುಂದುವರೆದ ಕಾರ್ಯಕ್ರಮವಾಗಿ ನವೆಂಬರ್ 28 ರಂದು ನವೀನ ಕಟ್ಟಡದಲ್ಲಿ ಕಾರ್ಯಾಲಯ ಪ್ರವೇಶ ಹಾಗೂ ಆಶ್ಲೇಷ ಬಲಿ ಪ್ರಧಾನವಾಗಿ ನಡೆಯಿತು. ಸಾಯಂಕಾಲ 6.00 ಗಂಟೆಗೆ ದುರ್ಗಾಪೂಜೆ ಜರುಗಿತು

ಈ ವಿಶೇಷ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪ್ ಸಿಂಹ ನಾಯಕ್, ಅನೇಕ ಗಣ್ಯರು, ಸಮಾಜಸೇವಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಭಜನೆಯ ಮೂಲಕ ದೇವರ ಸ್ತುತಿ ಕಾರ್ಯಕ್ರಮಕ್ಕೆ ಭಕ್ತಿಪರ ವಾತಾವರಣದ ಸೊಬಗು ಹೆಚ್ಚಿಸಿತು.

ಹೊಸ ಕಟ್ಟಡದ ಆರಂಭದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಪುನಶ್ಚೇತನವನ್ನು ಪಡೆದುಕೊಂಡು ಸ್ವಾವಲಂಬನೆಯತ್ತ ಸಾಗುವಂತೆ ಹಾಗೂ ಸೇವಾಭಾರತಿಯ ವಿವಿಧ ಸೇವಾಚಟುವಟಿಕೆಗಳು ಈ ಹೊಸ ಕಟ್ಟಡದ ಮೂಲಕ ಮತ್ತಷ್ಟು ಸಕ್ರಿಯವಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

Related posts

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಆಟೋರಿಕ್ಷಾ ಕಾರ್ಮಿಕರ ಬದುಕು ಉಳಿಸಲು ದರ ಪರಿಷ್ಕರಣೆ ಅನಿವಾರ್ಯ: ಬಿ.ಎಂ.ಎಸ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya
error: Content is protected !!