25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ


ಬೆಳ್ತಂಗಡಿ :ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಡ – ಕನ್ಯಾಡಿ ಗ್ರಾಮಗಳ ಶಕ್ತಿ ಕೇಂದ್ರ ಕಾರ್ಯಾಗಾರವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಜೈನ್ ಎಳನೀರು ಇವರ ಅಧ್ಯಕ್ಷತೆಯಲ್ಲಿ ನ 30ರಂದು ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಜರುಗಿತು.


ಈ ಕಾರ್ಯಾಗಾರದಲ್ಲಿ ಪಕ್ಷದ ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಲಾಳ್ ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಮಂಡಲದ ಉಪಾಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಭಾರಿಗಳಾದ ಸದಾನಂದ ಉಂಗಿಲ ಬೈಲು ಮುಂಬರುವ ಚುನಾವಣೆಗಳ ತಯಾರಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಮಂಡಲದ ಕೋಶಾಧಿಕಾರಿಗಳಾದ ಜಯಂತ್ ಗೌಡ ಗುರಿಪಳ್ಳ, ತಾಲೂಕು ಎಸ್ ಸಿ ಮೋರ್ಚದ ಅಧ್ಯಕ್ಷರಾದ ಈಶ್ವರ ಭೈರ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದಕುಮಾರ್ ಲಾಯಿಲ ಉಪಸ್ಥಿತರಿದ್ದರು. ಶಕ್ತಿ ಕೇಂದ್ರದ ಪ್ರಮುಖರಾದ ವಿಜಯ ಗೌಡ ಸ್ವಾಗತಿಸಿ ಧನ್ಯವಾದವಿತ್ತರು.
ಈ ಸಂದರ್ಭ ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ, ಪಂಚಾಯತ್ ಸಧಸ್ಯರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿ ಸದಸ್ಯರುಗಳು, ca ಬ್ಯಾಂಕ್ ಹಾಲಿನ ಸೊಸೈಟಿ ನಿರ್ದೇಶಕರು ಗಳು,ಹಿರಿಯರು ಹಾಗೂ ಪಕ್ಷದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!