September 6, 2026
ಗ್ರಾಮಾಂತರ ಸುದ್ದಿ

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ


ಬೆಳ್ತಂಗಡಿ :ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಡ – ಕನ್ಯಾಡಿ ಗ್ರಾಮಗಳ ಶಕ್ತಿ ಕೇಂದ್ರ ಕಾರ್ಯಾಗಾರವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಜೈನ್ ಎಳನೀರು ಇವರ ಅಧ್ಯಕ್ಷತೆಯಲ್ಲಿ ನ 30ರಂದು ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಜರುಗಿತು.


ಈ ಕಾರ್ಯಾಗಾರದಲ್ಲಿ ಪಕ್ಷದ ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಲಾಳ್ ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಮಂಡಲದ ಉಪಾಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಭಾರಿಗಳಾದ ಸದಾನಂದ ಉಂಗಿಲ ಬೈಲು ಮುಂಬರುವ ಚುನಾವಣೆಗಳ ತಯಾರಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಮಂಡಲದ ಕೋಶಾಧಿಕಾರಿಗಳಾದ ಜಯಂತ್ ಗೌಡ ಗುರಿಪಳ್ಳ, ತಾಲೂಕು ಎಸ್ ಸಿ ಮೋರ್ಚದ ಅಧ್ಯಕ್ಷರಾದ ಈಶ್ವರ ಭೈರ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದಕುಮಾರ್ ಲಾಯಿಲ ಉಪಸ್ಥಿತರಿದ್ದರು. ಶಕ್ತಿ ಕೇಂದ್ರದ ಪ್ರಮುಖರಾದ ವಿಜಯ ಗೌಡ ಸ್ವಾಗತಿಸಿ ಧನ್ಯವಾದವಿತ್ತರು.
ಈ ಸಂದರ್ಭ ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ, ಪಂಚಾಯತ್ ಸಧಸ್ಯರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿ ಸದಸ್ಯರುಗಳು, ca ಬ್ಯಾಂಕ್ ಹಾಲಿನ ಸೊಸೈಟಿ ನಿರ್ದೇಶಕರು ಗಳು,ಹಿರಿಯರು ಹಾಗೂ ಪಕ್ಷದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.

Related posts

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳ ನಿರ್ಮಾಣ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಅಕ್ರಮ ಮರಳು ಸಾಗಾಟ: ಪೊಲೀಸರ ದಾಳಿ; ಎರಡು ಟಿಪ್ಪರ್ ವಾಹನ ವಶ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya
error: Content is protected !!