23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿನಿಧನವರದಿ

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕುತ್ಲೂರು ನಿವಾಸಿ ಚಿತ್ರಾಗದನ್(57) ಮೃತಪಟ್ಟವರು. ನ. 24ರಂದು ಬೆಳಗ್ಗೆ 7.30ಕ್ಕೆ ಕುತ್ಲೂರು ಶಾಲಾ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಯೋಗೀಶ್ ಚಲಾಯಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಿತ್ರಾಗದನ್ ಅವರನ್ನು ‌ಸ್ಥಳೀಯ ಕ್ಲಿನಿಕ್ ನಲ್ಲಿ ಚಿಕಿತ್ಸೆ ಕೊಡಿಸಿ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ನ.30 ರಂದು ಬೆಳಗ್ಗಿನ ಜಾವ 3:30 ಕ್ಕೆ ಮೃತಪಟ್ಟಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya
error: Content is protected !!