September 6, 2026
ಅಪಘಾತಗ್ರಾಮಾಂತರ ಸುದ್ದಿನಿಧನವರದಿ

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕುತ್ಲೂರು ನಿವಾಸಿ ಚಿತ್ರಾಗದನ್(57) ಮೃತಪಟ್ಟವರು. ನ. 24ರಂದು ಬೆಳಗ್ಗೆ 7.30ಕ್ಕೆ ಕುತ್ಲೂರು ಶಾಲಾ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಯೋಗೀಶ್ ಚಲಾಯಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಿತ್ರಾಗದನ್ ಅವರನ್ನು ‌ಸ್ಥಳೀಯ ಕ್ಲಿನಿಕ್ ನಲ್ಲಿ ಚಿಕಿತ್ಸೆ ಕೊಡಿಸಿ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ನ.30 ರಂದು ಬೆಳಗ್ಗಿನ ಜಾವ 3:30 ಕ್ಕೆ ಮೃತಪಟ್ಟಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!