September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ, ಟ್ರಸ್ಟ್‌, ನ ಕಳಿಯ ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಕರುಣಾಕರ ಜೈನ್ ರವರು ರುಡ್ ಸೆಟ್ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿ, ಸ್ವ ಉದ್ಯೋಗ ದ ಅವಶ್ಯಕತೆ ಮತ್ತು ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಪಿನೈಲ್ ಮಾರಾಟ ಸ್ವಉದ್ಯೋಗ ಮಾಡುತ್ತಿರುವ ಪ್ರಬುದ್ಧ ಕೇಂದ್ರದ ಸದಸ್ಯರಾದ ಯಶೋದಾ ರವರು ಪಿನೈಲು ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ಕಾರ್ಯಕ್ರಮದ ಲ್ಲಿ ಒಕ್ಕೂಟ ಅಧ್ಯಕ್ಷೆ ಶುಭಾಷಿಣಿ ಉಪಸ್ಥಿತರಿದ್ದರು. ಜ್ಞಾನ ವಿಕಾಸದ ಸಮನ್ವಯಧಿಕಾರಿಯಾದ ಶ್ರೀಮತಿ ಮಧುರಾ ವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಶ್ರೀಮತಿ ಸೌಮ್ಯ ಸ್ವಾಗತಿಸಿ , ತಿಲೋತ್ತಮ ಧನ್ಯವಾದವಿತ್ತರು.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!