September 6, 2026
ಬೆಳ್ತಂಗಡಿವರದಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯಲ್ಲಿ ತಾಂತ್ರಿಕ ಹಾಗೂ ಇತರ ಸಮಸ್ಯೆಗಳು ಬರುತ್ತಿದ್ದು ಕಳೆದ ಅ. 30ರಂದು ವಿದ್ಯಾರ್ಥಿವೇತನ ಅರ್ಜಿಯನ್ನು ಕೊನೆಯ ದಿನಾಂಕ ಎಂದು ಮಂಡಳಿಯು ಘೋಷಿಸಿತ್ತು. ಈ ವಿಚಾರವನ್ನು ಭಾರತೀಯ ಮಜ್ದೂರ್ ಸಂಘದ ಕಟ್ಟಡ ಕಾರ್ಮಿಕ ವಿಭಾಗವು ಕಾರ್ಮಿಕ ಸಚಿವರಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಈ ತಾಂತ್ರಿಕ ಸಮಸ್ಯೆಗಳು ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ವಿದ್ಯಾರ್ಥಿ ವೇತನದ ಅರ್ಜಿಯನ್ನು ಕಾಲಾವಕಾಶ ವಿಸ್ತರಿಸುವಂತೆ ವಿನಂತಿಸಲಾಗಿತ್ತು. ಇದಕ್ಕೆ ಪೂರಕವಾಗಿ ವಿಧಾನ ಪರಿಷತ್ತಿನ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಈ ಬಗ್ಗೆ ಕಾರ್ಮಿಕ ಸಚಿವರು ಹಾಗೂ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸುವಂತೆ ಆಗ್ರಹಿಸಿದ್ದರು.

ಇದೀಗ ಡಿಸೆಂಬರ್ 30ರವರೆಗೆ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸಿರುತ್ತಾರೆ. ಈ ಪ್ರಯೋಜನವನ್ನು ಕಾರ್ಮಿಕರು ಪಡೆದುಕೊಳ್ಳುವಂತೆ ಬಿ ಎಂ ಎಸ್ ನ ರಾಜ್ಯ ಕಾರ್ಯದರ್ಶಿ ಎ ಜೈ ರಾಜ್ ಸಾಲಿಯಾನ್ ಕಾನರ್ಪ ಅವರು ವಿನಂತಿಸಿದ್ದಾರೆ

Related posts

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya
error: Content is protected !!