July 23, 2026
ಬೆಳ್ತಂಗಡಿವರದಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯಲ್ಲಿ ತಾಂತ್ರಿಕ ಹಾಗೂ ಇತರ ಸಮಸ್ಯೆಗಳು ಬರುತ್ತಿದ್ದು ಕಳೆದ ಅ. 30ರಂದು ವಿದ್ಯಾರ್ಥಿವೇತನ ಅರ್ಜಿಯನ್ನು ಕೊನೆಯ ದಿನಾಂಕ ಎಂದು ಮಂಡಳಿಯು ಘೋಷಿಸಿತ್ತು. ಈ ವಿಚಾರವನ್ನು ಭಾರತೀಯ ಮಜ್ದೂರ್ ಸಂಘದ ಕಟ್ಟಡ ಕಾರ್ಮಿಕ ವಿಭಾಗವು ಕಾರ್ಮಿಕ ಸಚಿವರಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಈ ತಾಂತ್ರಿಕ ಸಮಸ್ಯೆಗಳು ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ವಿದ್ಯಾರ್ಥಿ ವೇತನದ ಅರ್ಜಿಯನ್ನು ಕಾಲಾವಕಾಶ ವಿಸ್ತರಿಸುವಂತೆ ವಿನಂತಿಸಲಾಗಿತ್ತು. ಇದಕ್ಕೆ ಪೂರಕವಾಗಿ ವಿಧಾನ ಪರಿಷತ್ತಿನ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಈ ಬಗ್ಗೆ ಕಾರ್ಮಿಕ ಸಚಿವರು ಹಾಗೂ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸುವಂತೆ ಆಗ್ರಹಿಸಿದ್ದರು.

ಇದೀಗ ಡಿಸೆಂಬರ್ 30ರವರೆಗೆ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸಿರುತ್ತಾರೆ. ಈ ಪ್ರಯೋಜನವನ್ನು ಕಾರ್ಮಿಕರು ಪಡೆದುಕೊಳ್ಳುವಂತೆ ಬಿ ಎಂ ಎಸ್ ನ ರಾಜ್ಯ ಕಾರ್ಯದರ್ಶಿ ಎ ಜೈ ರಾಜ್ ಸಾಲಿಯಾನ್ ಕಾನರ್ಪ ಅವರು ವಿನಂತಿಸಿದ್ದಾರೆ

Related posts

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
error: Content is protected !!