September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ರಿ. ಅಳದಂಗಡಿ ಇವರ ಸಾರಥ್ಯದಲ್ಲಿ ನಡೆಯುತ್ತಿರುವ ಅರುವ ಯಕ್ಷಗಾನ ತರಬೇತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ನ.30 ನಡೆಯಿತು.

ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ನಲ್ಲಿ ನಡೆದ ಹೆತ್ತವರ ಮತ್ತು ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಸಭೆಯ ಅಧ್ಯಕ್ಷತೆಯನ್ನು ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ವಹಿಸಿದ್ದರು.
ವೇದಿಕೆಯಲ್ಲಿ ಟ್ರಸ್ಟಿಗಳಾದ ಅರುಣ್ ಅರುವ, ಸದಾನಂದ ಬಿ.ಕುದ್ಯಾಡಿ ಹಾಗೂ ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದು ಕೆಲವು ಮಾಹಿತಿಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ 2026-2027 ನೇ ಸಾಲಿಗೆ ಕೇಂದ್ರಕ್ಕೆ ಪ್ರಥಮ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಶಿಕ್ಷಕರಾದ ಸದಾಶಿವ ಕರಂಬಾರು, ಉಪಾಧ್ಯಕ್ಷರಾಗಿ ಪವಿತ್ರ ಅಳದಂಗಡಿ , ನೂತನ ಕಾರ್ಯದರ್ಶಿಯಾಗಿ ಸುಲ್ಕೇರಿ ಶ್ರೀರಾಮ ಶಾಲೆಯ ಶಿಕ್ಷಕಿ ಶಶಿಕಲಾ ಅಳದಂಗಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ವಿನಿ ಪಿಲ್ಯ ಮತ್ತು ಕೋಶಾಧಿಕಾರಿಯಾಗಿ
ಜಯಪ್ರಕಾಶ್ ದೇವಾಡಿಗ ಗೋಳಿಕಟ್ಟೆ ಆಯ್ಕೆಯಾದರು.

ಜನವರಿ 17 ರಂದು ಯಕ್ಷಗಾನ ತರಗತಿ ವಿದ್ಯಾರ್ಥಿಗಳ ಪ್ರಥಮ ರಂಗಪ್ರವೇಶ ನಡೆಯಲಿದ್ದು ಈ ಬಗ್ಗೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ವಿವಿಧ ಕಡೆ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ
ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಟ್ರಸ್ಟಿ ಅರುಣ್ ಜೈನ್ ಧನ್ಯವಾದ ಸಲ್ಲಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya
error: Content is protected !!