22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ರಿ. ಅಳದಂಗಡಿ ಇವರ ಸಾರಥ್ಯದಲ್ಲಿ ನಡೆಯುತ್ತಿರುವ ಅರುವ ಯಕ್ಷಗಾನ ತರಬೇತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ನ.30 ನಡೆಯಿತು.

ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ನಲ್ಲಿ ನಡೆದ ಹೆತ್ತವರ ಮತ್ತು ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಸಭೆಯ ಅಧ್ಯಕ್ಷತೆಯನ್ನು ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ವಹಿಸಿದ್ದರು.
ವೇದಿಕೆಯಲ್ಲಿ ಟ್ರಸ್ಟಿಗಳಾದ ಅರುಣ್ ಅರುವ, ಸದಾನಂದ ಬಿ.ಕುದ್ಯಾಡಿ ಹಾಗೂ ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದು ಕೆಲವು ಮಾಹಿತಿಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ 2026-2027 ನೇ ಸಾಲಿಗೆ ಕೇಂದ್ರಕ್ಕೆ ಪ್ರಥಮ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಶಿಕ್ಷಕರಾದ ಸದಾಶಿವ ಕರಂಬಾರು, ಉಪಾಧ್ಯಕ್ಷರಾಗಿ ಪವಿತ್ರ ಅಳದಂಗಡಿ , ನೂತನ ಕಾರ್ಯದರ್ಶಿಯಾಗಿ ಸುಲ್ಕೇರಿ ಶ್ರೀರಾಮ ಶಾಲೆಯ ಶಿಕ್ಷಕಿ ಶಶಿಕಲಾ ಅಳದಂಗಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ವಿನಿ ಪಿಲ್ಯ ಮತ್ತು ಕೋಶಾಧಿಕಾರಿಯಾಗಿ
ಜಯಪ್ರಕಾಶ್ ದೇವಾಡಿಗ ಗೋಳಿಕಟ್ಟೆ ಆಯ್ಕೆಯಾದರು.

ಜನವರಿ 17 ರಂದು ಯಕ್ಷಗಾನ ತರಗತಿ ವಿದ್ಯಾರ್ಥಿಗಳ ಪ್ರಥಮ ರಂಗಪ್ರವೇಶ ನಡೆಯಲಿದ್ದು ಈ ಬಗ್ಗೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ವಿವಿಧ ಕಡೆ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ
ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಟ್ರಸ್ಟಿ ಅರುಣ್ ಜೈನ್ ಧನ್ಯವಾದ ಸಲ್ಲಿಸಿದರು.

Related posts

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!