23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ರಿ. ಅಳದಂಗಡಿ ಇವರ ಸಾರಥ್ಯದಲ್ಲಿ ನಡೆಯುತ್ತಿರುವ ಅರುವ ಯಕ್ಷಗಾನ ತರಬೇತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ನ.30 ನಡೆಯಿತು.

ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ನಲ್ಲಿ ನಡೆದ ಹೆತ್ತವರ ಮತ್ತು ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಸಭೆಯ ಅಧ್ಯಕ್ಷತೆಯನ್ನು ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ವಹಿಸಿದ್ದರು.
ವೇದಿಕೆಯಲ್ಲಿ ಟ್ರಸ್ಟಿಗಳಾದ ಅರುಣ್ ಅರುವ, ಸದಾನಂದ ಬಿ.ಕುದ್ಯಾಡಿ ಹಾಗೂ ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದು ಕೆಲವು ಮಾಹಿತಿಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ 2026-2027 ನೇ ಸಾಲಿಗೆ ಕೇಂದ್ರಕ್ಕೆ ಪ್ರಥಮ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಶಿಕ್ಷಕರಾದ ಸದಾಶಿವ ಕರಂಬಾರು, ಉಪಾಧ್ಯಕ್ಷರಾಗಿ ಪವಿತ್ರ ಅಳದಂಗಡಿ , ನೂತನ ಕಾರ್ಯದರ್ಶಿಯಾಗಿ ಸುಲ್ಕೇರಿ ಶ್ರೀರಾಮ ಶಾಲೆಯ ಶಿಕ್ಷಕಿ ಶಶಿಕಲಾ ಅಳದಂಗಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ವಿನಿ ಪಿಲ್ಯ ಮತ್ತು ಕೋಶಾಧಿಕಾರಿಯಾಗಿ
ಜಯಪ್ರಕಾಶ್ ದೇವಾಡಿಗ ಗೋಳಿಕಟ್ಟೆ ಆಯ್ಕೆಯಾದರು.

ಜನವರಿ 17 ರಂದು ಯಕ್ಷಗಾನ ತರಗತಿ ವಿದ್ಯಾರ್ಥಿಗಳ ಪ್ರಥಮ ರಂಗಪ್ರವೇಶ ನಡೆಯಲಿದ್ದು ಈ ಬಗ್ಗೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ವಿವಿಧ ಕಡೆ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ
ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಟ್ರಸ್ಟಿ ಅರುಣ್ ಜೈನ್ ಧನ್ಯವಾದ ಸಲ್ಲಿಸಿದರು.

Related posts

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya
error: Content is protected !!