23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

ಉಜಿರೆ: ಶ್ರದ್ಧಾ-ಭಕ್ತಿಯಿಂದ ಮಾಡುವ ಭಜನೆಯಿಂದ ಸುಲಭದಲ್ಲಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಕಾರ್ಯದರ್ಶಿ ಎ.ವಿ.ಶೆಟ್ಟಿ ಹೇಳಿದರು.

ಅವರು ನ.30ರಂದು ಗುರುವಾಯನಕೆರೆಯಲ್ಲಿ ಉಡುಪಿಗೆ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಭಜನಾ ಪರಿಷತ್ ನೇತೃತ್ವದಲ್ಲಿ ಪ್ರಯಾಣಿಸುವ ಎರಡೂವರೆ ಸಾವಿರಕ್ಕೂ ಮಿಕ್ಕಿದ ಭಜನಾಪಟುಗಳಿಗೆ ಶುಭ ಹಾರೈಸಿ ಮಾತನಾಡಿದರು.


ಕಳೆದ 27 ವರ್ಷಗಳಿಂದ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಪ್ರತಿವರ್ಷ ನಡೆಸುತ್ತಿರುವ ಭಜನಾ ಕಮ್ಮಟದಿಂದಾಗಿ ಪ್ರತಿಮನೆಗಳಲ್ಲಿ ನಿತ್ಯವೂ ಭಜನೆ ಮಾಡುವ ಸಂಸ್ಕಾರ ಬೆಳೆದುಬಂದಿದೆ. ತನ್ಮೂಲಕ ಪ್ರತಿಮನೆಗಳಲ್ಲಿಯೂ, ಪ್ರತಿಯೊಬ್ಬರ ಮನದಲ್ಲೂ ಶಾಂತಿ, ನೆಮ್ಮದಿ ನೆಲೆಸಿದೆ. ಎಳೆಯ ಮಕ್ಕಳು ಕೂಡಾ ಭಜನೆಯನ್ನು ರಾಗ, ತಾಳ, ಲಯಬದ್ಧವಾಗಿ ಹಾಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ ಎಂದು ಹೇಳಿ ಶುಭ ಹಾರೈಸಿ ಭಜನಾ ಸೇವೆಯಿಂದ ಎಲ್ಲರಿಗೂ ಶ್ರೀ ಕೃಷ್ಣನ ಅನುಗ್ರಹ ದೊರಕಲೆಂದು ಆಶಿಸಿದರು.

ಧರ್ಮಸ್ಥಳದಲ್ಲಿ ಅನ್ನಪೂರ್ಣ ಛತ್ರದ ಮೇಲ್ವಿಚಾರಕ ಸುಬ್ರಹ್ಮಣ್ಯ ಪ್ರಸಾದ್ ಮಾತನಾಡಿ, ಭಜನಾ ಕಮ್ಮಟದಿಂದಾಗಿ ಪ್ರತಿ ಊರಿನಲ್ಲಿಯೂ ಭಜನಾ ಮಂಡಳಿ ಮೂಲಕ ಉತ್ತಮ ನಾಯಕರು ಮೂಡಿ ಬಂದಿದ್ದು ಊರಿನ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.


ನವಶಕ್ತಿಯ ಉದ್ಯಮಿ ರಾಜೇಶ್ ಶೆಟ್ಟಿ ಶುಭಾಶಂಸನೆ ಮಾಡಿದರು.
ಎಸ್.ಡಿ.ಎಂ. ಭಜನಾ ಪರಿಷತ್‌ನ ರಾಜ್ಯಾಧ್ಯಕ್ಷ ಚಂದ್ರಶೇಖರ ಸಾಲಿಯಾನ್, ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಶೆಟ್ಟಿ ಉಪ್ಪಡ್ಕ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ, ಮನೋಹರ ಬಳಂಜ, ಭಜನಾ ಪರಿಷತ್ ವಲಯಾಧ್ಯಕ್ಷ ಜಗದೀಶ್ ಮೈರ, ಜಯರಾಜ್ ನಡಕ್ಕರ, ಸಂದೇಶ್ ಮದ್ದಡ್ಕ, ನಾಗೇಶ್ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಅಶೋಕ್ ಆರಂಭದಲ್ಲಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya
error: Content is protected !!