23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

ಉರುವಾಲು: ಭಕ್ತರ ಅಭೀಷ್ಟಗಳನ್ನು ಈಡೇರಿಸುವ, ವಿಘ್ನಗಳನ್ನು ನಿವಾರಿಸುವ ಆನೆ ಮುಖದ ಪ್ರಥಮ ಪೂಜಿಪ ದೇವ ಗಣಪತಿಯನ್ನು ಭಜನೆಯ ಮೂಲಕ ಸುಗಿಸಿಕೊಂಡು ಬರುತ್ತಿರುವ ಕುಪ್ಪೆಟ್ಟಿಯ ಗಣೇಶ ಭಜನಾ ಮಂದಿರದಲ್ಲಿ ಲೋಕಾ ಕಲ್ಯಾಣಕ್ಕಾಗಿ ಅಥರ್ವಶೀರ್ಷ ಗಣಯಾಗ ಹಾಗೂ ಮಹಾಚಂಡಿಕಾಯಾಗ ಡಿ.6-8ರವರೆಗೆ ನಡೆಯಲಿದೆ ಎಂದು ಲೋಕಾರ್ಪಣ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ತಿಳಿಸಿದರು.

ಅವರು ಡಿ.1 ರಂದು ಕುಪ್ಪೆಟ್ಟಿ ಗಣೇಶ ಭಜನಾ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಡಿ.6-8ವರೆಗೆ ಮೂರುದಿನಗಳಲ್ಲಿ ವಿವಿಧ ಧಾರ್ಮಿಕ ವೈಧಿಕ ವಿಧಿವಿಧಾನಗಳು, ಸಾಂಸ್ಕೃತಿಕ, ಧಾರ್ಮಿಕಾ ಕಾರ್ಯಕ್ರಮಗಳು ನಡೆಯಲಿವೆ. ವಿಶೇಷವಾಗಿ ಡಿ.7ರಂದು ಗೋಧೋಳಿ ಮುಹೂರ್ತದಲ್ಲಿ ಸಂಜೆ 6ಕ್ಕೆ ನೂತನ ರಾಜಗೋಪುರವನ್ನು ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಾರ್ಪಣೆಗೊಳಿಸಲಿದ್ದಾರೆ. ಅವರನ್ನು ವೈಭವದ ಮೆರವಣಿಗೆ ಮೂಲಕ ಮಂತ್ರಘೋಷ, ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುತ್ತದೆ. ಶ್ರೀ ದುರ್ಗಾ ಗಣಪತಿ ಸಭಾವಭವದ ಲೋಕರ್ಪಾಣೆಯನ್ನು ಮುಂಬೈನ ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ ನೇರವೆರಿಸಲಿದ್ದಾರೆ. ಡಿ.೬ರಂದುಉರುವಾಲು, ಕಣಿಯೂರು, ಮೊಗ್ರು, ಇಳಂತಿಲ, ಕರಾಯ, ತಣ್ಣೀರುಪಂತ, ಬಾರ್ಯ, ತೆಕ್ಕಾರು, ಪುತ್ತಿಲ, ನಾಳ, ಮಚ್ಚಿನ, ಕಳಿಯ ಗ್ರಾಮ, ಓಡಿಲ್ನಾಳ, ನ್ಯಾಯತರ್ಪು, ಕುವೆಟ್ಟು, ಉಪ್ಪಿನಂಗಡಿ ಹಾಗೂ ಬೆಳ್ತಂಗಡಿ ತಾಲೂಕಿನ ಬೇರೆ ಬೇರೆ ಧಾರ್ಮಿಕ ಶ್ರದ್ಧಾಕೇಂದ್ರಗಳಿಂದ ಹೊರೆಕಾಣಿಕೆ ಸಮರ್ಪಣೆಯಾಗಲಿದೆ ಎಂದು ವಿವರಿಸಿದರು.

ಅಥರ್ವಶೀರ್ಷ ಗಣಯಾಗದಲ್ಲಿ ಪಾಲ್ಗೊಳ್ಳುವ ಉರುವಾಲು ಗ್ರಾಮದ ಸೇವಾಕರ್ತರು ಸನಾದಿನಗಳ ಶುದ್ಧ ಪ್ರತಾಚರಣೆಯಲ್ಲಿದ್ದು ಗರಿಕೆಯನ್ನು ಮನೆಯ ದೇವರ ಮಂಟಪದಲ್ಲಿಟ್ಟು ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ ನಿರ್ವಿಘ್ನಂ ಕುರುಮೇ ದೇವ ಸರ್ವ ಕಾರ್ಯೇಷು ಸರ್ವದ ಈ ಮಂತ್ರವನ್ನು ಪಠಣ ಮಾಡಿ ಅನುಷ್ಠಾನ ಮಾಡಿದ ಒಂದು ಮುಷ್ಟಿಗರಿಕೆಯನ್ನು ಡಿ.7ರಂದು ಬೆಳಗ್ಗೆ ಗಂಟೆ 9.೦೦ಕ್ಕೆ ಸರಿಯಾಗಿ ಯಾಗ ಶಾಲೆಗೆ ಕಡ್ಡಾಯವಾಗಿ ತಂದು ಒಪ್ಪಿಸಬೇಕು. ಚಂಡಿಕಾ ಯಾಗದಲ್ಲಿ ಪಾಲ್ಗೊಳ್ಳುವ ಸೇವಾಕರ್ತರು 11 ದಿನಗಳ ಶುದ್ಧವ್ರತಾಚರಣೆಯಲ್ಲಿದ್ದು ತೆಂಗಿನಕಾಯಿಯನ್ನು ಮನೆಯ ದೇವರ ಮಂಟಪದಲ್ಲಿಟ್ಟು ಸರ್ವ ಮಂಗಳ ಮಾಂಗಲ್ಯ ಶಿವೇ ಸರ್ವಾರ್ಥ ಸಾಧಕೇ, ಶರಣೇ ತ್ರಯಂಬಕೇ ದೇವಿ ನಾರಾಯಣಿ ನಮೋಸ್ತುತೇ ಈ ಮಂತ್ರವನ್ನು ಪಠಣಮಾಡಿ ತಾವು ಅನುಷ್ಠಾನ ಮಾಡಿದ ಒಂದು ತೆಂಗಿನಕಾಯಿಯನ್ನು ಡಿ.8ರಂದು ಬೆಳಗ್ಗೆ ಗಂಟೆ 9.೦೦ಕ್ಕೆ ಸರಿಯಾಗಿ ಯಾಗ ಶಾಲೆಗೆ ಕಡ್ಡಾಯವಾಗಿ ತಂದು ಒಪ್ಪಿಸುವುದು ಎಂದು ಮಾಹಿತಿ ನೀಡಿದರು.

ಲೋಕಾರ್ಪಣಾ ಸಮಿತಿ ಕಾರ್ಯಾಧ್ಯಕ್ಷ ಕಿರಣ್ ಚಂದ್ರ ಡಿ.ಪುಷ್ಪಗಿರಿ ಮಾತನಾಡಿ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಗೋಪುರವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅವರನ್ನು ಕಲ್ಲೇರಿ ಪೇಟೆಯಿಂದ ಭಜನಾ ಮಂದಿರದ ವರೆಗೆ ವೈಭವದ ಮೆರವಣಿಗೆ ಮೂಲಕ ಮಂತ್ರಘೋಷ, ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದರು.

ಶ್ರೀ ಗಣೇಶ ಭಜನಾ ಮಂಡಳಿ ಟ್ರಸ್ಟ್ ಅಧ್ಯಕ್ಷ ರೋಹಿತ ಶೆಟ್ಟಿ ಪಿ.ಕುಪ್ಪೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರವೀಣ್ ರೈ ಕುಪ್ಪೆಟ್ಟಿ, ಭಜನಾ ಮಂದಿರದ ಅಧ್ಯಕ್ಷ ಹರೀಶ್ ನಾಯ್ಕ ಹೊಸ ಮಣ್ಣು, ಸ್ವಾಗತ ಸಮಿತಿ ಸಂಚಾಲಕ ಯೋಗೀಶ್ ಪೂಜಾರಿ ಕಡ್ತಿಲ, ಅನ್ನದಾನ ಮತ್ತು ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಗೌಡ ಪೊಸಂದೋಡಿ, ವೈದಿಕ ಸಮಿತಿ ಸಂಚಾಲಕ ಕೆ.ಎನ್. ಪ್ರಸನ್ನ ಮುಚ್ಚಿನ್ನಾಯ ನೈದಿಲೆ ಹಲೇಜಿ, ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ಮಹಿಳಾ ಸಮಿತಿ ಅಧ್ಯಕ್ಷೆ ಸುಮತಿ ಜನಾರ್ದನ ಬೇಂಗಾಯಿ ಹಾಗೂ ಎಸ್ ಕೆ ಡಿ ಆರ್ ಪಿ ವಲಯ ಮೇಲ್ವಿಚಾರಕ ವಿಶ್ವನಾಥ್ ಪೂಜಾರಿ ಉಪಸ್ಥಿತರಿದ್ದರು.

Related posts

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!