July 23, 2026
ಬೆಳ್ತಂಗಡಿವರದಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯಲ್ಲಿ ತಾಂತ್ರಿಕ ಹಾಗೂ ಇತರ ಸಮಸ್ಯೆಗಳು ಬರುತ್ತಿದ್ದು ಕಳೆದ ಅ. 30ರಂದು ವಿದ್ಯಾರ್ಥಿವೇತನ ಅರ್ಜಿಯನ್ನು ಕೊನೆಯ ದಿನಾಂಕ ಎಂದು ಮಂಡಳಿಯು ಘೋಷಿಸಿತ್ತು. ಈ ವಿಚಾರವನ್ನು ಭಾರತೀಯ ಮಜ್ದೂರ್ ಸಂಘದ ಕಟ್ಟಡ ಕಾರ್ಮಿಕ ವಿಭಾಗವು ಕಾರ್ಮಿಕ ಸಚಿವರಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಈ ತಾಂತ್ರಿಕ ಸಮಸ್ಯೆಗಳು ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ವಿದ್ಯಾರ್ಥಿ ವೇತನದ ಅರ್ಜಿಯನ್ನು ಕಾಲಾವಕಾಶ ವಿಸ್ತರಿಸುವಂತೆ ವಿನಂತಿಸಲಾಗಿತ್ತು. ಇದಕ್ಕೆ ಪೂರಕವಾಗಿ ವಿಧಾನ ಪರಿಷತ್ತಿನ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಈ ಬಗ್ಗೆ ಕಾರ್ಮಿಕ ಸಚಿವರು ಹಾಗೂ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸುವಂತೆ ಆಗ್ರಹಿಸಿದ್ದರು.

ಇದೀಗ ಡಿಸೆಂಬರ್ 30ರವರೆಗೆ ವಿದ್ಯಾರ್ಥಿ ವೇತನದ ಅರ್ಜಿಯ ಕಾಲಾವಕಾಶವನ್ನು ವಿಸ್ತರಿಸಿರುತ್ತಾರೆ. ಈ ಪ್ರಯೋಜನವನ್ನು ಕಾರ್ಮಿಕರು ಪಡೆದುಕೊಳ್ಳುವಂತೆ ಬಿ ಎಂ ಎಸ್ ನ ರಾಜ್ಯ ಕಾರ್ಯದರ್ಶಿ ಎ ಜೈ ರಾಜ್ ಸಾಲಿಯಾನ್ ಕಾನರ್ಪ ಅವರು ವಿನಂತಿಸಿದ್ದಾರೆ

Related posts

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

Suddi Udaya

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya
error: Content is protected !!